ಸಂಸ್ಕೃತಿ-ಸಾಮರಸ್ಯ ಸಮುದಾಯ ರಂಗಸಂಗಮ


ದೇಶಕ್ಕೆ ಸ್ವಾತಂತ್ರ್ಯ ಬಂದರೂ ಕವಡೇಪುರಕ್ಕೆ ಸ್ವಾತಂತ್ರ್ಯ ಬಂದಿಲ್ಲರೀ

ಶೀರ್ಷಿಕೆ:ಕವಡೆಪುರದ ಕೌರವರು ಲೇಖಕರು: ವೈ.ಎಸ್. ಹರಗಿ ಪ್ರಕಾಶಕರು: ಶ್ರೀನಿವಾಸ ಪುಸ್ತಕ ಪ್ರಕಾಶನ ಪುಟ: 344 ಬೆಲೆ:ರೂ.170/-

ದೇಶ ಕಟ್ಟುವ ಕನಸು ಕಾಣ್ಕೆಗಳು

ಪುಸ್ತಕದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಚಿಟಿಕೆ ಹೊಡೆಯಿರಿ ಚಿಂತನ ಪುಸ್ತಕ

ಸ್ವಾತಂತ್ರ್ಯ ಸಮರ ಇತಿಹಾಸದ ಹೊಳೆಯುವ ನಕ್ಷತ್ರ ಭಗತ್ ಸಿಂಗ್

ಶೀರ್ಷಿಕೆ: ಅಮರ ಹುತಾತ್ಮ ಸರದಾರ್ ಭಗತ್ ಸಿಂಗ್ ಲೇಖಕರು:ಜಿತೇಂದ್ರನಾಥ ಸಾನ್ಯಾಲ್ ಅನುವಾದ:ಟಿ.ಜಿ.ಪ್ರಭಾಶಂಕರ ಪ್ರಕಾಶಕರು : ನ್ಯಾಷನಲ್ ಬುಕ್ ಟ್ರಸ್ಟ್  ಪುಟ:೩೨೪ ಬೆಲೆ:ರೂ.೧೩೦/-

ಹೇಳತೇನ ಕೇಳ…ಕನ್ನಡಕ್ಕೆ ಮತ್ತೊಂದು ಜ್ಞಾನಪೀಠ ಪ್ರಶಸ್ತಿ

ಕನ್ನಡದ ಹಿರಿಯ ಕವಿ ಚಂದ್ರಶೇಖರ ಕಂಬಾರರಿಗೀಗ ಜ್ಞಾನಪೀಠ ಪ್ರಶಸ್ತಿಯ ಸಂಭ್ರಮ. ಹದಿಮೂರು ವರ್ಷಗಳ ಅಂತರದ ನಂತರ ಕಂಬಾರರ ಮೂಲಕ ಕನ್ನಡಕ್ಕೆ ಮತ್ತೊಂದು ಜ್ಞಾನಪೀಠ ದೊರೆಯುವುದರೊಂದಿಗೆ, ಕನ್ನಡದ `ಜ್ಞಾನಪೀಠ ಸಪ್ತರ್ಷಿ ಮಂಡಲ`ದ ಪುನರ‌್ರಚನೆಯಾಗಿದ್ದು, ಆ ಸಂಖ್ಯೆ ಎಂಟಕ್ಕೇರಿದೆ. ಕನ್ನಡದ ಜ್ಞಾನಪೀಠಿಗಳದೀಗ `ಅಷ್ಟ ದಿಕ್ಪಾಲಕ` ಪಡೆ.

ಏಳು ಲಕ್ಷ ರೂಪಾಯಿ ನಗದು, ಸರಸ್ವತಿ ದೇವಿಯ ಕಂಚಿನ ಪ್ರತಿಮೆ ಹಾಗೂ ಬಿನ್ನವತ್ತಳೆ ಹೊಂದಿರುವ ಜ್ಞಾನಪೀಠ ಪ್ರಶಸ್ತಿ ಭಾರತೀಯ ಸಾಹಿತ್ಯಕ್ಷೇತ್ರದಲ್ಲಿ ಅತ್ಯುನ್ನತ ಗೌರವ. ಈ ಮೇರುಮನ್ನಣೆಗೆ ಕಂಬಾರರು ಪಾತ್ರ. ಅನೇಕ ವರ್ಷಗಳಿಂದ ಜ್ಞಾನಪೀಠ ಕಂಬಾರರತ್ತ ಮುಖ ಮಾಡಿಯೇ ಇತ್ತಾದರೂ, ಮುಹೂರ್ತ ಕೂಡಿಬಂದಿರುವುದು ಈಗ. ಜ್ಞಾನಪೀಠದ ಪ್ರಭೆಯಲ್ಲಿ ಮಿನುಗುತ್ತಿರುವ ಕಂಬಾರರ ಬಗ್ಗೆ ಮಾತನಾಡುವಾಗ ಅವರ ದಶಮುಖಗಳು ಕಣ್ಮುಂದೆ ಸುಳಿಯುತ್ತವೆ. ನಾಟಕಕಾರ, ಕಾದಂಬರಿಕಾರ, ಕನ್ನಡ ವಿಶ್ವವಿದ್ಯಾಲಯದ ಬುನಾದಿ ಗಟ್ಟಿಗೊಳಿಸಿದ ಆಡಳಿತಗಾರ, ಸಂಶೋಧಕ- ಹೀಗೆ ಕಂಬಾರರದು ಬಹುರೂಪ. ಆದರೆ, ಇವೆಲ್ಲವುಗಳ ಮುನ್ನೆಲೆಯಲ್ಲಿ ನಿಲ್ಲುವುದು ಅವರ ಕಾವ್ಯಪ್ರೀತಿ. ಕಾವ್ಯವೆನ್ನುವುದು ಅವರ ಪಾಲಿಗೆ ಆತ್ಮದ ಕಸುಬುದಾರಿಕೆ.

`ಕವಿ ಮತ್ತು ಕವಿತೆ ಮುಖಾಮುಖಿಯಾಗಬೇಕು. ಕಾವ್ಯ ರಚನೆ ಅಂದ್ರೆ ಅದು ಏಕಾಂತದ ಸಂವಾದ, ಗುದ್ದಾಟ. ಇದರ ಅರಿವು ಕವಿಗೆ ಇರಬೇಕು. ನನ್ನ ಎಲ್ಲವನ್ನೂ ಹಿಂಡಿ ಹೊರಬಂದಿದೆ ಎನ್ನಿಸಬೇಕು ಕವಿತೆ. ಅದು, ಆತ್ಮ ಹಿಂಡಿ ಬರಬೇಕು. ನೀರು ಕಡೆದರೆ ಬೆಣ್ಣೆ ಬರುತ್ತಲ್ಲ, ಹಾಗೆ. ಅದು ಹುಡುಗಿಯೊಂದಿಗಿನ ಪ್ರೀತಿಯಂತೆ ತೀರಾ ಖಾಸಗಿಯಾದುದು. ದೇವರ ಮುಂದೆಯೂ ಹೇಳಿಕೊಳ್ಳಲಾಗದ ಪ್ರೀತಿಯಂತಹದ್ದು`. ಇದು ಕಾವ್ಯದ ಬಗ್ಗೆ ಕಂಬಾರರ ನಿಲುವು.

ಶೀರ್ಷಿಕೆ: ಸಿಂಗಾರೆವ್ವ ಮತ್ತು ಅರಮನೆ ಲೇಖಕರು: ಚಂದ್ರಶೇಖರ ಕಂಬಾರ ಪ್ರಕಾಶಕರು:ಪ್ರಿಂಟರ್ಸ್ ಪ್ರಕಾಶನ ಪುಟ:೨೦೨

ಈವರೆಗಿನ ಹೇಳತೇನ ಕೇಳ…
ಕಾವ್ಯ: ಮುಗುಳು, ಹೇಳತೇನ ಕೇಳ, ತಕರಾರಿನವರು, ಸಾವಿರದ ನೆರಳು, ಚಕೋರಿ, ಆಯ್ದ ಕವನಗಳು, ಬೆಳ್ಳಿಮೀನು, ಈವರೆಗಿನ ಹೇಳತೇನ ಕೇಳ (ಸಮಗ್ರ-1994), ಅಕ್ಕಕ್ಕು ಹಾಡುಗಳೇ, ಎಲ್ಲಿದೆ ಶಿವಾಪುರ?
ನಾಟಕ: ಬೆಂಬತ್ತಿದ ಕಣ್ಣು, ನಾರ್ಸಿಸಸ್, ಋಷ್ಯಶೃಂಗ, ಜೋಕುಮಾರಸ್ವಾಮಿ, ಚಾಳೇಶ, ಸಂಗ್ಯಾಬಾಳ್ಯಾ ಅನಬೇಕೋ ನಾಡೊಳಗ, ಕಿಟ್ಟಿಯ ಕಥೆ, ಖರೋಖರ, ಮತಾಂತರ, ಹರಕೆಯ ಕುರಿ, ಸಾಂಬಶಿವ ಪ್ರಹಸನ, ಸಿರಿ ಸಂಪಿಗೆ, ಹುಲಿಯ ನೆರಳು, ಬೆಪ್ಪು ತಕ್ಕಡಿ ಬೋಳೇಶಂಕರ, ಪುಷ್ಪರಾಶಿ, ತುಕ್ರನ ಕನಸು, ಮಹಾಮಾಯಿ, ಶಿವರಾತ್ರಿ.
ಕಾದಂಬರಿ: ಅಣ್ಣತಂಗಿ, ಕರಿಮಾಯಿ, ಜಿ.ಕೆ.ಮಾಸ್ತರ ಪ್ರಣಯ ಪ್ರಸಂಗ, ಸಿಂಗಾರೆವ್ವ ಮತ್ತು ಅರಮನೆ, ಶಿಖರ ಸೂರ್ಯ.

ಸಂಶೋಧನೆ: ಸಂಗ್ಯಾ ಬಾಳ್ಯಾ, ಬಣ್ಣೀಸಿ ಹಾಡವ್ವ ನನ್ನ ಬಳಗ, ಬಯಲಾಟ, ಮಾತಾಡೋ ಲಿಂಗವೇ, ನಮ್ಮ ಜಾನಪದ, ಬಂದಿದೆ ನನ್ನ ಜಡೆಯೊಳಗೆ, ಕನ್ನಡ ನಾಟಕ ಸಂಪುಟ, ಕನ್ನಡ ಜಾನಪದ ವಿಶ್ವಕೋಶ, ಲಕ್ಷಾಪತಿ ರಾಜನ ಕತೆ, ಬೇಡರ ಹುಡುಗ ಮತ್ತು ಗಿಳಿ, ಕಾಸಿಗೊಂದು ಸೇರು, ನೆಲದ ಮರೆಯ ನಿದಾನ, ಬೃಹದ್ದೇಶಿ ಚಿಂತನೆ.

ಪಿಎಚ್.ಡಿ ಮಹಾಪ್ರಬಂಧ: ಉತ್ತರ ಕರ್ನಾಟಕದ ಜಾನಪದ ರಂಗಭೂಮಿ.

ಪ್ರಶಸ್ತಿ-ಪುರಸ್ಕಾರ: ರಾಜ್ಯ ನಾಟಕ ಅಕಾಡೆಮಿ ಬಹುಮಾನಗಳು, ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನಗಳು, ಕೇರಳದ ಆಶಾನ್ ಪ್ರಶಸ್ತಿ, ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ರಾಜ್ಯ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಇತ್ಯಾದಿ.

ಕಂಬಾರರ ಆಸೆ : ಒಂದರಿಂದ ಹತ್ತನೆಯ ತರಗತಿಯವರೆಗೆ ಸರ್ಕಾರವೇ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು. ಅಲ್ಲದೆ, ಅಂಗನವಾಡಿಯಿಂದ ಸ್ನಾತಕೋತ್ತರ ವಿಜ್ಞಾನ, ಕಲೆ ಪದವಿಗಳನ್ನು ಕನ್ನಡದಲ್ಲೇ ಕಲಿಸುವ ಮಹಾವಿದ್ಯಾಲಯವೊಂದು ಕನ್ನಡ ನೆಲದಲ್ಲಿ ತಲೆಯೆತ್ತಬೇಕು.

 

ಕೃಪೆ: ಪ್ರಜಾವಾಣಿ

ಯಾಕೆ ಮಾರ್ಕ್ಸ್ ಹೇಳಿದ್ದು ಸರಿ?

 

ಶೀರ್ಷಿಕೆ: why marx was right ಲೇಖಕರು: ಟೆರಿ ಈಗಲ್ ಟನ್ ಪ್ರಕಾಶಕರು: ಯಾಲೆ ಯುನಿವರ್ಸಿಟಿ ಪುಟ:     ಬೆಲೆ:

ಮೇ ಡೇ ಚಿರಾಯುವಾಗಲಿ

ಶೀರ್ಷಿಕೆ: ಮೇ ಡೇ ಹುತಾತ್ಮದ ಮಹಾಗಾಥೆ  ಲೇಖಕರು:ವಿಲಿಯಂ ಆಡಲ್ ಮನ್  ಅನುವಾದ:ರಾಹು  ಪುಟಗಳು:278 ಬೆಲೆ:200/-

ಗಣಿಯಾಳದಲ್ಲಿ ಸಿಕ್ಕಿಹಾಕಿಕೊಂಡ 33 ಕಾರ್ಮಿಕರನ್ನು ಮೇಲಕ್ಕೆತ್ತಿದ ಅಭೂತಪೂರ್ವ ಘಟನೆಯ ದಾಖಲೆ ಕನ್ನಡದಲ್ಲಿ !

. . .
ರಾಷ್ಟಪತಿ ಬಂದರೆಂಬ ಸುದ್ಧಿ ಕೇಳಿ ಎಲ್ಲಾ ಕ್ಯಾಮರಾಗಳೂ ಮಾಧ್ಯಮ ಕೇಂದ್ರಕ್ಕೆ ದೌಡಾಯಸಿದವು.

ಅದುವರೆಗೆ ಸುರಕ್ಷಿತವಾಗಿ ಬಚ್ಚಿಟ್ಟಿದ್ದ ಕೆಂಪಕ್ಷರದ ಚೀಟಿ ಆಂಡ್ರೂ ಸುಗಾರೆಯ ಕೈ ದಾಟಿ ಈಗ ಪಿನೆರೊ ಕೈಗೆ ಬಂತು. ಆಳದಿಂದ ಬಂದ ಆ ಪುಟ್ಟ ಸಂದೇಶವನ್ನು ರಾಷ್ಟ್ರಪತಿ ಎತ್ತಿ ಹಿಡಿದು ಕ್ಯಾಮೆರಾಗಳಿಗೆ ಪ್ರದರ್ಶಿಸಿದರು. `ನಾವು 33 ಜನರೂ ಸುರಕ್ಷಿತವಾಗಿದ್ದೇವೆ’ ಎಂಬರ್ಥದ ಬರಹದ `ಲೋಸ್ 33′ (ಈ 33) ಎಂಬ ಪುಟ್ಟ ಪದ ಇಡೀ ಅಮೆರಿಕಾ ಖಂಡದ ಸಹಸ್ರಾರು ಟಿವಿ ಚಾನೆಲ್ ಗಳಲ್ಲಿ, ಪತ್ರಿಕೆಗಳಲ್ಲಿ ತಲೆಬರಹವಾಗಿ ರಾರಾಜಿಸಿತು.

ಅದೇ ವೇಳೆಗೆ ಡ್ರಿಲ್ಲಿಂಗ್ ಯಂತ್ರದ ತಾಂತ್ರಿಕ ಸಿಬ್ಬಂದಿ ಭಾರೀ ಗಾತ್ರದ ತಂತಿ ಸುರುಳಿಯನ್ನು ಹೊತ್ತು ತಂದಿದ್ದರು. ತಂತಿಯ ತುದಿಯಲ್ಲಿ ಒಂದು ಪುಟ್ಟ ಫೋನ್ ಉಪಕರಣವೊಂದನ್ನು ಕಟ್ಟಿ ಮೆಲ್ಲಗೆ ರಂಧ್ರದ ಮೂಲಕ ಇಳಿ ಬಿಟ್ಟರು. `ಸಹಾಯ ಬರಲಿದೆ, ಗಣಿ ಸಚಿವರು ತುಸು ಹೊತ್ತಿನಲ್ಲೇ ಮಾತಾಡಲಿದ್ದಾರೆ. ನಿಮ್ಮಲ್ಲಿ ಯಾರಾದರೊಬ್ಬರು ರಂಧ್ರದ ಬಳಿ ನಿಂತಿರಿ’ ಎಂಬ ಪುಟ್ಟ ಸಂದೇಶದ ಚೀಟಿಯೊಂದನ್ನು ಫೋನ್ ಜತೆ ಕಟ್ಟಿದ್ದರು. ಅದು ಆ ಮುಷ್ಟಿಯಗಲದ ರಂಧ್ರದಲ್ಲಿ ಮೆಲ್ಲಮೆಲ್ಲನೆ ಇಳಿಯುತ್ತ 680 ಮೀಟರ‍್ ಆಳದಲ್ಲಿದ್ದವರನ್ನು ತಲುಪಿತು. ರೆಕಾರ್ಡಿಂಗ್ ವ್ಯವಸ್ಥೆಯನ್ನೆಲ್ಲ ಮತ್ತೊಮ್ಮೆ ಪರಿಶೀಲಿಸಿದ್ದಾಯಿತು.

ಅರ್ಧ ಗಂಟೆಯಲ್ಲಿ ಪಾತಾಳದಲ್ಲಿ ಫೋನ್ ರಿಂಗಾಯಿತು. ಕಾರ್ಮಿಕ ತಂಡದ ಮುಖ್ಯಸ್ಥ ಲೂಯಿಸ್ ಊರ್ಝುವಾ ಫೋನ್ ಎತ್ತಿಕೊಂಡ.

`ಹೇಗಿದ್ದೀರಾ ಎಲ್ಲ?’ ಸಚಿವರ ಪ್ರಶ್ನೆಗೆ ಕೆಳಿಗಿನಿಂದ ತುಸು ಕ್ಷೀಣವಾದ ಆದರೆ ಸ್ಪಷ್ಟ ಉತ್ತರ ಬಂತು.

`ನಾವೆಲ್ಲಾ ಕ್ಷೇಮವಾಗಿದ್ದೇವೆ. ರಕ್ಷಣೆ ಬರುವುದನ್ನೇ ಕಾಯ್ತಾ ಇದ್ದೇವೆ’ ಉರ್ಝುವಾ ಧ್ವನಿ.

ಗೋಲ್ ಬೋರ್ನ್ ಮುಂದಿನ ಮಾತು ಹೇಳುವ ಮೊದಲೇ ಕೆಳಗಿನಿಂದ ಮಾತು ಕೇಳಿಸಿತು:

`ಸರ‍್, ಒಂದು ಕ್ಷಣ ನಿಲ್ಲಿ. ನಾವೆಲ್ಲ ಇಲ್ಲಿ ಒಟ್ಟಾಗಿ ನಿಂತಿದ್ದೇವೆ’.

ತುಸು ಅವಾಕ್ಕಾದ ಗಣಿಸಚಿವರು ಫೋನನ್ನು ಆಚೆ ಕಿವಿಯಿಂದ ಈಚೆ ಕಿವಿಯತ್ತ ತರುತ್ತಲೇ ಕೆಳಗಿನಿಂದ ತೀರ ಪರಿಚಿತ ವೃಂದಗಾನ ಕೇಳಬಂತು -

`ಪ್ಯೂರೊಚಿಲೀ ಎಸ್ತೂಸಿಲೋ ಅಜುವಾಲ್ಡೊ. . .’

ಗೋಲ್ ಬೋರ್ನ್ ಹಠಾತ್ತನೆ ಸೆಟೆದು ನಿಂತರು. ಸಚಿವರ ಸುತ್ತ ನಿಂತವರಿಗೆ ತುಸು ಗಾಬರಿ. ಏನಾಗಿರಬಹುದು?

ಎರಡು ನಿಮಿಷ ಮೌನವಾಗಿ ಸೆಟೆದೇ ನಿಂತಿದ್ದ ಸಚಿವರು,

`ಓ ಎಲ್ ಸಿಲೋ…. ಓ ಎಲ್ ಸಿಲೊ …. ಕೊಂತ್ರಾಲಾ ಒಪ್ರೆಸೆನ್ ….’ ಎಂದು ರಾಗವಾಗಿ ಹೇಳಿದಾಗ ಎಲ್ಲರಿಗೂ ಅರ್ಥವಾಯಿತು.

ಪಾತಾಳದಲ್ಲಿದ್ದ ಎಲ್ಲ 33 ಜನರೂ ಒಟ್ಟಾಗಿ ಚಿಲಿಯ ರಾಷ್ಟಗೀತೆಯನ್ನು ಹಾಡುತ್ತಿದ್ದರು!

ನೆರೆದಿದ್ದವರ ಕಣ್ಣು ಮಂಜಾಗಿತ್ತು.
….

- ಪುಸ್ತಕದೊಳಗಿನಿಂದ (ಪುಟ : 39-40)

ಏಳುನೂರು ಮೀಟರ‍್ ಆಳದಲ್ಲಿ 33 ಗಣಿಗಾರರು ಸಿಕ್ಕಿಹಾಕಿಕೊಂಡಿದ್ದಾರೆ. ಹದಿನೇಳು ದಿನ ಶ್ರಮಿಸಿ 3 ಅಂಗುಲ ಬೋರ‍್ ರಂಧ್ರ ಕೊರೆದು ನೋಡಿದರೆ ಅವರೆಲ್ಲ ಬದುಕಿರುವುದು ಗೊತ್ತಾಗಿದೆ. ಇನ್ನೂ ದೊಡ್ಡ ರಂಧ್ರ ಕೊರೆದು ಅವರನ್ನು ಮೇಲಕ್ಕೆತ್ತಲು ನಾಲ್ಕು ತಿಂಗಳೇ ಬೇಕು. ಅದುವರೆಗೆ ಆ ಮುಷ್ಟಿಗಾತ್ರದ ರಂಧ್ರದ ಮೂಲಕ ಅವರಿಗೆ ಆಹಾರ-ಔಷಧ ರವಾನಿಸಬೇಕು; ಅವರನ್ನು ಮೇಲಕ್ಕೆತ್ತಲು ರಾಕೆಟ್ ಮಾದರಿಯ ಲಿಫ್ಟ್ ನಿರ್ಮಿಸಬೇಕು.,

2010ರ ಅಕ್ಟೋಬರ‍್ ನಲ್ಲಿ ಚಿಲಿ ಎಂಬ ಪುಟ್ಟ ದೇಶ ಎಲ್ಲರನ್ನೂ ಸುರಕ್ಷಿತ ಮೇಲೆತ್ತಿದಾಗ ಆ ಮಹಾಸಾಹಸದ ವೀಕ್ಷಣೆಗೆ 3000 ವರದಿಗಾರರು ಸೇರಿದ್ದರು. ನೂರು ಕೋಟಿಗೂ ಹೆಚ್ಚು ಜನರು ನೇರ ಪ್ರಸಾರದಲ್ಲಿ ಅದನ್ನು ಕಣ್ಣಾರೆ ನೋಡಿದರು. ಸಾಮಾನ್ಯ ಪ್ರಜೆಗಳ ಈ ಅಸಾಮಾನ್ಯ ಸಾಧನೆ `ಮನುಕುಲಕ್ಕೇ ಸ್ಫೂರ್ತಿದಾಯಕ ಸಾಧನೆ’ ಎಂಬ ಶ್ಲಾಘನೆಗೆ ಪಾತ್ರವಾಯಿತು.

ಕಲ್ಪನೆಗೂ ಮೀರಿದ ಈ ನೈಜಕತೆಯನ್ನು ಥ್ರಿಲ್ಲರ‍್ ಶೈಲಿಯಲ್ಲಿ ಬರೆದ ಸರೋಜಾ ಪ್ರಕಾಶ್ ಭೌತವಿಜ್ಞಾನದ ಉಪನ್ಯಾಸಕಿಯಾಗಿದ್ದವರು. ವಿಜ್ಞಾನವನ್ನು ಎಲ್ಲರಿಗೂ ಅರ್ಥವಾಗುವಂತೆ ಬರೆಯುವ ಇವರು ಚಿಲಿ ಸಾಹಸದ ಕಥೆಯನ್ನು ಎಲ್ಲರಿಗೂ ಇಷ್ಟವಾಗುವಂತೆ ಬರೆದಿದ್ದಾರೆ. ಈ ಅಪೂರ್ವ ಘಟನೆ ಇಂಗ್ಲೀಷ್ ನಲ್ಲಿ ಕಾದಂಬರಿಯಾಗಿಯೋ, ಸಿನೆಮಾ ಆಗಿಯೋ ಬರುವ ಮೊದಲೇ ಕನ್ನಡ ಸಾಹಿತ್ಯಕ್ಕೆ ಸೇರ್ಪಡೆಯಾಗುತ್ತಿದೆ. ಅದು ಹೆಮ್ಮೆಯ ದಾಖಲೆ.

- ನಾಗೇಶ ಹೆಗಡೆ
(ಪುಸ್ತಕದ ಬೆನ್ನುಡಿಯಿಂದ )

ಶೀರ್ಷಿಕೆ: ಚಿಲಿಯ ಕಲಿಗಳು – ಗಣಿ ಪಾತಾಳದಲ್ಲಿ 33 ಜನ 69 ದಿನ ಲೇಖಕರು:ಸರೋಜಾ ಪ್ರಕಾಶ ಪ್ರಕಾಶಕರು: ಭೂಮಿ ಬುಕ್ಸ್ ಪುಟಗಳು:156+8 ಬೆಲೆ:ರೂ.110/-

ಅಕ್ಷರ ಕರ್ನಾಟಕ ಪುಸ್ತಕ ಮಳಿಗೆಗೆ ಬನ್ನಿ ಪುಸ್ತಕ ಖರೀದಿಸಿರಿ

ವಿಜಯನಗರದ ಸುತ್ತಮುತ್ತ ವಾಸಿಸುವವ ಸಾಹಿತ್ಯಾಸಕ್ತರಿಗೆ, ಓದುಗರಿಗೆ ಒಂದು ಸಂತೋಷದ ಸುದ್ದಿ. ಸಾಹಿತ್ಯಕ್ಕೆ ಸಂಬಂಧಪಟ್ಟ ಸಂವಾದ ಕಾರ್ಯಕ್ರಮವನ್ನು ತಿಂಗಳಿಗೊಂದು ಬಿಡದಂತೆ ನಡೆಸಿಕೊಂಡು ಬರುತ್ತಿದ್ದಾರೆ ಅಕ್ಷರ ಕರ್ನಾಟಕ ಪುಸ್ತಕ ಮಳಿಗೆ, ವಿಜಯನಗರ ಇವರು. ಇದರ ಸಾರಥ್ಯ ವಹಿಸಿದವರು ಖ್ಯಾತ ಪತ್ರಕರ್ತೆ ಆರ‍್.ಪೂರ್ಣಿಮಾ ಹಾಗೂ ಕರ್ನಾಟಕ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಸಿ.ವೀರಣ್ಣ ಅವರು.

ಪ್ರತೀ ತಿಂಗಳು ಎರಡನೇ ಶನಿವಾರ ಅಥವಾ ಭಾನುವಾರ ಈ ಕಾರ್ಯಕ್ರಮ ಇರುತ್ತದೆ. ಡಾ. ಸಿದ್ದಲಿಂಗಯ್ಯ ಮತ್ತು ಮುಖ್ಯಮಂತ್ರಿ ಚಂದ್ರು ಅವರಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ಇದುವರೆಗೆ ಕೆ.ವಿ. ನಾರಾಯಣ, ರವಿಂದ್ರ ರೇಷ್ಮೆ, ನಾ. ಸೋಮೇಶ್ವರ, ಪ್ರೊ. ಕಲ್ಬುರ್ಗಿ, ನೇಮಿಚಂದ್ರ, ಚಿದಾನಂದ ಮೂರ್ತಿ, ಪ್ರಸನ್ನ, ದಿನೇಶ್ ಅಮಿನ್ ಮಟ್ಟು ಮೊದಲಾದವರು ಭಾಗವಹಿಸಿದ್ದಾರೆ. (ಕಳೆದ ತಿಂಗಳು ರಾಜರಾಜರಾಜೆಶ್ವರಿ ನಗರದಲ್ಲಿ ಅಕ್ಷರ ಕರ್ನಾಟಕದ ಶಾಖೆ ಆರಂಭ ಆಯಿತು).

ಹಾಗೇ ನಮಗೆ ಬೇಕಾಗುವ ಪುಸ್ತಕಗಳೂ ಅಲ್ಲಿವೆ. ಬೇಕಾಗಿರುವ ಪುಸ್ತಕಗಳಿಗೆ ಗಾಂಧೀನಗರದ ವರೆಗೆ ಹೋಗಬೇಕಾದ ಅಗತ್ಯ ಇನ್ನಿಲ್ಲ

ವಿಳಾಸ : ಅಕ್ಷರ ಕರ್ನಾಟಕ ಪುಸ್ತಕ ಮಳಿಗೆ: ನಂ 46ಇ, 15ನೇ ಮುಖ್ಯರಸ್ತೆ, ವಿಜಯನಗರ

ಪುಸ್ತಕ ಬಿಡುಗಡೆಗೆ ಆಹ್ವಾನ

ಆತ್ಮೀಯರೆ,
ಇದೇ ತಿಂಗಳ 26ರಂದು (26/04/2011) ಸಂಜೆ 6 ಗಂಟೆಗೆ ನನ್ನ
‘ನೆನಪುಗಳಿಗೇಕೆ ಸಾವಿಲ್ಲ’ - ಕಥಾಸಂಕಲನ ಹಾಗೂ
‘ಮಳೆಬಿಲ್ಲ ನೆರಳು’ - ವಿಜ್ಞಾನ ಲೇಖನಗಳ ಸಂಕಲನ ಬಿಡುಗಡೆಯಾಗುತ್ತಿದೆ.
ಪುಸ್ತಕಗಳ ಬಿಡುಗಡೆ ಮತ್ತು ಅಧ್ಯಕ್ಷತೆ: ಡಾ.ಜಿ.ರಾಮಕೃಷ್ಣ
‘ನೆನಪುಗಳಿಗೇಕೆ ಸಾವಿಲ್ಲ’ ಕೃತಿ ಪರಿಚಯ: ಡಾ.ಕೆ.ವೈ.ನಾರಾಯಣಸ್ವಾಮಿ
‘ಮಳೆಬಿಲ್ಲ ನೆರಳು’ ಕೃತಿ ಪರಿಚಯ: ಶ್ರೀ ಅದ್ದೆ ಮಂಜುನಾಥ್
ಸ್ಥಳ: ನಯನ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು
ಎಲ್ಲರಿಗೂ ಸ್ವಾಗತ
ಪುಸ್ತಕ ಪರಿಚಯ ಇಲ್ಲಿದೆ:


ಮಳೆಬಿಲ್ಲ ನೆರಳು- ವಿಜ್ಞಾನ ಲೇಖನಗಳ ಸಂಕಲನ

ಪುಟಗಳು:244, ಬೆಲೆ ರೂ.150-00

ಪ್ರಕಾಶಕರು: ಬರಹ ಪಬ್ಲಿಶಿಂಗ್ ಹೌಸ್, ಹಂಪಿನಗರ, ಬೆಂಗಳೂರು-560104

“ಮೇಲುನೋಟಕ್ಕೆ ವಿಜ್ಞಾನದ ಲೇಖನಗಳು ಎಂಬಂಥೆ ತೋರಿದರೂ ಸೂಕ್ಷ್ಮ ಮತ್ತು ಸಮಗ್ರ, ವೈಯುಕ್ತಿಕ ಮತ್ತು ಸಾಮಾಜಿಕ ಸ್ಥಳೀಯ ಮತ್ತು ಜಾಗತಿಕ ಎಂಬ ಧ್ರುವೀಕರಣವಿಲ್ಲದ ಅಖಂಡ ಗ್ರಹಿಕೆ ಮತ್ತು ಸಂಕೀರ್ಣ ನೇಯ್ಗೆಯ ಮೂಲಕ ಕೇವಲ ಮಾಹಿತಿಯ ತಂತ್ರಜ್ಞಾನವಾಗುಳಿಯದೆ ಸಂಸ್ಕೃತಿ ಚಿಂತನೆಯ ನಿಜೋದಯವಾಗಿ ಸ್ಥಿತ್ಯಂತರಗೊಂಡಿರುವ ಇಲ್ಲಿನ ಬರೆಹಗಳನ್ನು `ನಿರಂಕುಶ ಸಾಹಿತ್ಯ’ವೆಂದೇ ಕರೆಯಲಿಚ್ಛಿಸುತ್ತೇನೆ. ಮಾನವ ಕೇಂದ್ರಿತವಾದ ಎಲ್ಲ ಬಗೆಯ ರಚನೆಗಳನ್ನು ನಿರಾಕರಿಸುತ್ತಾ ಉಳ್ಳವರು ಹುಟ್ಟುಹಾಕಿದ ಸುಳ್ಳು ಸೃಷ್ಟಿಯ `ಸಚರಾಚರವೆಲ್ಲ’ ರಚನೆಗೆ ಬಾರದಂದಿನ ನೆಲೆಗೆ ನಮ್ಮನ್ನು ಕರೆದೊಯ್ಯುವ ಇಲ್ಲಿನ ಬರೆಹಗಳು ಅಪರಿಮಿತದ ಕತ್ತಲೆಯೊಳಗೆ ಈಜುತ್ತಿರುವ ವಿಪರೀತದ ಬೆಳಕಿನ ಹುಳುಗಳಾಗಿ ಕಾಣುತ್ತವೆ.”

- ಪ್ರೊ.ವಿ.ಚಂದ್ರಶೇಖರ ನಂಗಲಿ

“ಪ್ರತಿ ಪ್ರಬಂಧದಲ್ಲಿಯೂ ಓದುಗನನ್ನು ತನ್ನದೆ ಅವಲೋಕನೆಯತ್ತ ನೂಕಿ, ಆ ಪ್ರಬಂಧ ರಚನೆಯಲ್ಲಿಯೇ ತಾನೂ ಒಂದು ಪಾತ್ರವಾಗುವಂತೆ ಪ್ರೇರೇಪಿಸುತ್ತಾರೆ. ಇದು ಬಾಲು ಅವರ ಲೇಖನಗಳ ಅನನ್ಯತೆ. ಬಹುಶಃ ಈ ವಿಭಿನ್ನತೆಗೆ ಕಾರಣ - `ವಿಜ್ಞಾನದಲ್ಲಿ ರಹಸ್ಯ ಬಗೆದಷ್ಟೂ ನಿಗೂಢ ಹೆಚ್ಚುತ್ತಾ ಹೋಗುತ್ತದೆ. ಆ ನಿಗೂಢದ ಬೆಡಗೇ ಜೀವನ ಪ್ರೀತಿಯ ಮೂಲ ಸೆಲೆ’ ಎಂಬ ಅವರ ನಂಬಿಕೆ. ಈ ನಂಬಿಕೆಯಿಂದಲೇ ಬರೆಯುವ ಅವರು ತಮ್ಮೆಲ್ಲ ಲೇಖನಗಳಲ್ಲೂ, ವಿಜ್ಞಾನವನ್ನು ಓದುಗನ ಆಂತರ್ಯದ ಸಮೀಪಕ್ಕೆ ತಂದಿಡುವ ಕುಶಲತೆಯನ್ನು ಅಳವಡಿಸಿಕೊಂಡಿರುವುದು ವಿಶೇಷ.”

- ಡಾ.ಕೆ.ಎನ್.ಗಣೇಶಯ್ಯ

ನೆನಪುಗಳಿಗೇಕೆ ಸಾವಿಲ್ಲ? - ಕಥಾ ಸಂಕಲನ; ಡಾ. ಜೆ.ಬಾಲಕೃಷ್ಣ

ಪುಟಗಳು:146; ಬೆಲೆ ರೂ.100-00

ಪ್ರಕಾಶಕರು: ಬರಹ ಪಬ್ಲಿಶಿಂಗ್ ಹೌಸ್, ಹಂಪಿನಗರ, ಬೆಂಗಳೂರು-560104

ಇದು ನನ್ನ ಮೊದಲ ಕಥಾ ಸಂಕಲನ. ನಾನು 1983ರಿಂದ ಬರೆದ ಹದಿನಾಲ್ಕು ಕತೆಗಳು ಇಲ್ಲಿವೆ. ಸಾವಿರಾರು ವರ್ಷಗಳ ಹಿಂದೆ ಆದಿಮಾನವ ಮಾಡಿದ ಕೆಲಸವನ್ನೇ ನಾನು ಮಾಡಿದ್ದೇನೆ. ಬಾಲ್ಯದಿಂದ ಇದುವರೆಗಿನ ನನ್ನ ಬದುಕಿನ ಅಲ್ಲೊಂದು ಇಲ್ಲೊಂದು ಎಳೆಯನ್ನು ತೆಗೆದು ಅದಕ್ಕೆ ನನ್ನ ಕಲ್ಪನೆಯ ಮತ್ತೊಂದಷ್ಟು ಎಳೆಗಳನ್ನು ಸೇರಿಸಿ `ಕತೆ ಕಟ್ಟುವ’ ಪ್ರಯತ್ನ ಮಾಡಿದ್ದೇನೆ.

ಕೇಂದ್ರ ಸಾಹಿತ್ಯ ಅಕಾದೆಮಿಯಿಂದ ನಾನು ಅನುವಾದಿಸಿರುವ ‘ಭಾರತದ ಮೊದಲ ಕಾದಂಬರಿಗಳು’ ಇತ್ತೀಚೆಗೆ ಪ್ರಕಟವಾಗಿದೆ. ಅದರ ಪರಿಚಯವನ್ನೂ ಇಲ್ಲಿ ನೀಡಿದ್ದೇನೆ.

ಭಾರತದ ಮೊದಲ ಕಾದಂಬರಿಗಳು: ಮೂಲ ಸಂಪಾದಕರು: ಮೀನಾಕ್ಷಿ ಮುಖರ್ಜಿ

ಕನ್ನಡ ಅನುವಾದ: ಜೆ.ಬಾಲಕೃಷ್ಣ

ಪುಟಗಳು: 21+282; ಬೆಲೆ:ರೂ.175-00

ಪ್ರಕಾಶಕರು: ಸಾಹಿತ್ಯ ಅಕಾದೆಮಿ; ನವದೆಹಲಿ

ಯಾವುದೇ ಸಾಹಿತ್ಯ ಪ್ರಕಾರದ ಪ್ರಾರಂಭ ಮಸುಕು ಮಸುಕಾಗಿರುವಂತೆ ಭಾರತೀಯ ಕಾದಂಬರಿಗಳ ಪ್ರಾರಂಭವೂ ಮಸಕು ಮಸುಕಾಗಿದೆ. ಹತ್ತೊಂಬತ್ತನೇ ಶತಮಾನದಲ್ಲಿ ಬ್ರಿಟಿಷರು ಪರಿಚಯಿಸಿದ ಇಂಗ್ಲಿಷ್ ಶಿಕ್ಷಣದ ನೇರ ಪರಿಣಾಮದಿಂದಾಗಿ ಭಾರತದ ಕಾದಂಬರಿ ಒಂದು ಎರವಲು ಪ್ರಕಾರವೆಂಬ ಅನಿಸಿಕೆ ಬಹಳ ಕಾಲ ಪ್ರಶ್ನಾತೀತವಾಗಿ ಉಳಿದಿತ್ತು. ಆದರೆ ಇಂತಹ ಸಿದ್ಧಾಂತಗಳನ್ನು ಮರುಪರೀಕ್ಷಿಸುವ ಮತ್ತು ಭಾರತದಂತಹ ಬಹುಸಂಸ್ಕೃತಿಯ ಹಾಗೂ

ಬಹು ಭಾಷಾ ಪರಂಪರೆ ಆಯಾ ಚಾರಿತ್ರಿಕ-ಸಾಮಾಜಿಕ ಘಟ್ಟಗಳಲ್ಲಿ ಸಾಹಿತ್ಯದ ಈ ಪ್ರಕಾರದ ಮೇಲೆ ಬೀರಿರುವ ಪರಿಣಾಮಗಳನ್ನು ಈ ಕೃತಿ ಪರಿಶೋಧಿಸುವ ಪ್ರಯತ್ನ ಮಾಡುತ್ತದೆ. ಭಾರತದಲ್ಲಿ ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ರಾಷ್ಟ್ರದ ಪರಿಕಲ್ಪನೆಯೊಂದಿಗೇ ಕಾದಂಬರಿ ಪ್ರಕಾರ ಉಗಮವಾಯಿತೆನ್ನುತ್ತಾರೆ ಕೆಲ ಸಾಹಿತ್ಯ ಚರಿತ್ರಕಾರರು. ಈ ಸಂಪುಟವು ಸಾಹಿತ್ಯ ವಿಮರ್ಶಕರು, ಚರಿತ್ರಕಾರರು ಮತ್ತು ರಾಜಕೀಯ ತಾತ್ವಿಕ ಸಿದ್ಧಾಂತಕಾರರು ರಚಿಸಿರುವ ಹದಿನಾಲ್ಕು ಪ್ರಬಂಧಗಳನ್ನು ಒಳಗೊಂಡಿದೆ ಹಾಗೂ ಅವು ವಿವಿಧ ಭಾರತೀಯ ಭಾಷೆಗಳಲ್ಲಿನ ಮೊದಲ ಕಾದಂಬರಿಗಳನ್ನು ಮತ್ತು ಅವು ರಚನೆಗೊಂಡ ಸಂದರ್ಭಗಳನ್ನು ಪರಾಮರ್ಶಿಸುತ್ತದೆ.

Dr.J. BALAKRISHNA, Ph.D.
Associate Professor
Dept. of Kannada Studies
University of Agricultural Sciences
Hebbal, Bangalore-560024

Visit my Kannada blogs:

And also my English blog:
Follow

Get every new post delivered to your Inbox.