ಯಾದ್ ವಶೀಮ್ ಗೆ ೨೦೦೭ ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

scan0007

ಐವರಿಗೆ ಸಾಹಿತ್ಯ ಅಕಾಡೆಮಿ ಗರಿ
ಹಿರಿಯ ಸಾಹಿತಿ ಪ್ರೊ.ಅ.ರಾ.ಮಿತ್ರ ರೊಂದಿಗೆ ಹಸನಬಿ ಬೀಳಗಿ, ವಿಷ್ಣು ನಾಯ್ಕ, ಪ್ರೊ.ಮಲ್ಲಿಕಾರ್ಜುನ ಹಿರೇಮಠ ಮತ್ತು ಲಕ್ಷ್ಮಣ್ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ 2008ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2007ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಕಾವ್ಯ ಕಾದಂಬರಿ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಿಂದ 18 ಕೃತಿಗಳನ್ನು ಆಯ್ಕೆ ಮಾಡಲಾಗಿದೆ.
ಬಹುಮಾನಿತ ಕೃತಿಗಳು :
ಕಾವ್ಯ – ಒಡೆಯಲಾರದ ಪ್ರತಿಮೆ – ಬಸವರಾಜ ವಕ್ಕುಂದ
ಕಾದಂಬರಿ – ಯಾದ್ ವಶೀಮ್ – ನೇಮಿಚಂದ್ರ
ಸಣ್ಣಕತೆ – ನನ್ನ ಇನ್ನಷ್ಟು ಕತೆಗಳು – ಮಹಮ್ಮದ್ ಕುಳಾಯಿ
ನಾಟಕ – ದಾಳ – ಪ್ರೊ.ಎಸ್.ಜಿ.ಸಿದ್ಧರಾಮಯ್ಯ
ಲಲಿತ ಪ್ರಬಂಧ – ದೇವರುಗಳ ಟೈಮೇ ಸರಿಯಿಲ್ಲ – ಎಚ್.ಎಲ್.ಕೇಶವಮೂರ್ತಿ
ಪ್ರವಾಸ ಸಾಹಿತ್ಯ – ದುಬೈ ಎಂಬ ಮಾಯಾನಗರಿ – ಸಂಗಮೇಶ ಕೋಟಿ
ಜೀವನ ಚರಿತ್ರೆ – ಬಣ್ಣದ ಬದುಕಿನ ಚಿನ್ನದ ದಿನಗಳು – `ಪ್ರಜಾವಾಣಿ’ಯ ಗಣೇಶ ಅಮೀನಗಡ
ಸಾಹಿತ್ಯ ವಿಮರ್ಶೆ – ಉಲ್ಲೇಖ – ಕೆ.ವಿ.ತಿರುಮಲೇಶ್
ಗ್ರಂಥ ಸಂಪಾದನೆ – ನಂದಪ್ಪದೇವರ ಪ್ರಭುಚರಿತ್ರೆ – ಪ್ರೊ.ಎಸ್.ಉಮಾಪತಿ
ಮಕ್ಕಳ ಸಾಹಿತ್ಯ – ರೋಬೋಟ್ ಮತ್ತು ಚಿನ್ಹೆಗಳು – ನಾ.ಸು.ಭರತನ ಹಳ್ಳಿ
ವಿಜ್ಞಾನ ಸಾಹಿತ್ಯ – ಆಚಿನ ಲೋಕಕ್ಕೆ ಕಾಲಕೋಶ – ನಾಗೇಶ ಹೆಗಡೆ
ಮಾನವಿಕ – ಮಹಿಳಾ ಚಳವಳಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆ – ಹಾಲತಿ ಸೋಮಶೇಖರ‍್
ಸಂಶೋದನೆ – ಶಂಗಂ ತಮಿಳಗಂ ಮತ್ತು ಕನ್ನಡ ನಾಡು ನುಡಿ – ಎಸ್.ಶೆಟ್ಟರ‍್
ಅನುವಾದ (ಸೃಜನಶೀಲ) – ನೆಲವೆದ್ದು ಬಡಿಯಿತು – ಚಂದ್ರಕಾಂತ ಪೊಕಳೆ
ಅನುವಾದ (ಸೃಜನೇತರ) – ಅಧಿಕಾರ ಮೀಮಾಂಸೆ – ಪಿ.ವಿ.ನಾರಾಯಣ
ಸಂಕೀರ್ಣ – ವಕೀಲರೊಬ್ಬರ ವಗೈರೆಗಳು – ಸಿ.ಎಚ್.ಹನುಮಂತರಾಯ
ಲೇಖಕರ ಮೊದಲ ಕೃತಿ – ತತ್ರಾಣಿ – ಬಸವರಾಜ ಹೂಗಾರ
ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ – ಆರಿಜಿನ್ ಆಫ್ ಕ್ರಿಶ್ಚಿಯನ್ ಇನ್ ಅಂಡ್ ಅರೌಂಡ್ ಶ್ರೀರಂಗಪಟ್ಟಣ – ಫಾದರ‍್ ಡಾ.ಐ.ಅಂತಪ್ಪ
ಆಸಕ್ತರು ಅಕಾಡೆಮಿಯ ವೆಬ್ ಸೈಟ್ (www.karnatakasahithyaacademy.org) ನಲ್ಲಿ ಲೇಖಕರ ವಿಳಾಸ, ಪ್ರಶಸ್ತಿ ಮತ್ತು ಇನ್ನಿತರ ಮಾಹಿತಿಗಳನ್ನು ಪಡೆಯಬಹುದು

ಕೃಪೆ – ಪ್ರಜಾವಾಣಿ

Leave a Reply