ಕರ್ನಾಟಕ ಚರಿತ್ರೆ ಮತ್ತು ಸಂಸ್ಕೃತಿ – ಸಂಶೋಧನಾ ಲೇಖನ ಸಂಕಲನ

ಕರ್ನಾಟಕ ಚರಿತ್ರೆ ಮತ್ತು ಸಂಸ್ಕೃತಿ – ಸಂಶೋಧನಾ ಲೇಖನಗಳನ್ನೊಳಗೊಂಡ ಈ ಕೃತಿಯನ್ನು ವಸು ಎಂ.ವಿ.ಯವರು ಸಂಪಾದಿಸಿದ್ದಾರೆ. ಅಶ್ವತ್ಥನಾರಾಯಣ, ಉಷಾದೇವಿ ಎಂ.ವಿ., ಶಶಿಧರ‍್ ಎಂ. ಸಂಪಾದಕ ಬಳಗದಲ್ಲಿದ್ದಾರೆ. ಈ ಕೃತಿಯ 30 ಲೇಖನಗಳಲ್ಲಿ ಒಂದೊಂದು ಲೇಖನವೂ ಕರ್ನಾಟಕದಲ್ಲಿ ಇತಿಹಾಸ ಸಂಶೋಧನೆಯ ಒಂದೊಂದು ಸವಾಲನ್ನು ಪ್ರತಿನಿಧಿಸುತ್ತದೆ. ವಿಷಯ, ಆಕರ, ಒಳತೋಟಿಯಲ್ಲಿ ಹರಿಯುವ ಧೋರಣೆ, ಸಂಶೋಧಕರ ಹಿನ್ನೆಲೆ ಎಲ್ಲಕ್ಕೂ ಒಂದು ಅರ್ಥ ಕಾಣಿಸುತ್ತದೆ. ಲೇಖನಗಳ ಸಾಮ್ಯತೆಯ ಆಧಾರದ ಮೇಲೆ ಉಪಶೀರ್ಷಿಕೆಯೊಂದಿಗೆ ವಿಭಾಗಿಸಲಾಗಿದ್ದು `ಸಾಹಿತ್ಯದೊಳಗಣ ಚರಿತ್ರೆ‘ ಭಾಗದ ಎಲ್ಲ ಲೇಖನಗಳು ಒಂದಲ್ಲ ಒಂದು [...]

ಹಿಂದುತ್ವ ಮತ್ತು ದಲಿತರು

ಈ ಗ್ರಂಥದಲ್ಲಿ ಸೇರ್ಪಡೆಯಾಗಿರುವ ಲೇಖನಗಳು ಹಿಂದುತ್ವ ಶಕ್ತಿಗಳು ದಲಿತರನ್ನು ತಮ್ಮತ್ತ ಸೆಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಬಗ್ಗೆ ತಾತ್ವಿಕವೂ ಅನುಭವಜನ್ಯವೂ ಆದ ವಿಶ್ಲೇಷಣೆಗಳ ಮೂಲಕ ಸಾಕಷ್ಟು ಬೆಳಕು ಚೆಲ್ಲುತ್ತವೆ. ಕ್ರಿಯಾಶೀಲ ಚಳವಳಿಗಾರರು ಮತ್ತು ವಿದ್ವಾಂಸರುಗಳು ಬರೆದಿರುವ ಲೇಖನಗಳು ಈ ಗ್ರಂಥದಲ್ಲಿ ಸೇರ್ಪಡೆಯಾಗಿವೆ. ಈ ಲೇಖನಗಳಲ್ಲಿ ದಲಿತರ ಸಾಮಾಜಿಕ, ಸಾಂಸ್ಕೃತಿಕ, ಸೈದ್ಧಾಂತಿಕ ಮತ್ತು ರಾಜಕೀಯ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಚರ್ಚಿಸಲಾಗಿದೆ. ಜೊತೆಗೆ ಅವರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅಗತ್ಯವಾದ ಮುನ್ನೋಟದ ಬಗ್ಗೆ ಬೆಳಕು ಹರಿಸುವ ಲೇಖನಗಳೂ ಇಲ್ಲಿವೆ. ಇತ್ತೀಚಿನ ವಿದ್ಯಮಾನಗಳು ಸೃಷ್ಟಿಸಿರುವ [...]

ಬಿತ್ತಿದಂತೆ ಅತ್ತು

ವರ್ಷಗಳಿಂದ ಇಂಗ್ಲೀಷಿನಲ್ಲಿ ಬರೆದ ವರದಿ, ಲೇಖನಗಳ ಕನ್ನಡಾನುವಾದ `ಬಿತ್ತಿದ್ದೀರಿ … ಅದಕ್ಕೆ ಅಳುತ್ತೀರಿ’. ಸಾಯಿನಾಥ್ ಅವರ ತೀವ್ರ ಕಾಳಜಿ, ಕ್ಷೇತ್ರ ಸಮೀಕ್ಷೆಯ ಗಟ್ಟಿ ನೆಲೆ, ಮನಮುಟ್ಟುವ ವಿಶಿಷ್ಟ ಶೈಲಿ, ಹರಿತವಾದ ವಿಶ್ಲೇಷಣೆ ಈ ಬರವಣಿಗೆಗಳಲ್ಲಿ ಕಾಣುತ್ತದೆ. ಸಾಯಿನಾಥ್ ಅವರ ಇಂಗ್ಲೀಷ್ ಲೇಖನಗಳು ಮೊದಲ ನೋಟಕ್ಕೆ ಸರಳ ಎನ್ನಿಸಿದರೂ ವಾಸ್ತವದ ಸಂಕೀರ್ಣತೆಯ ಚಿತ್ರಣ, ಕಥನ ಶೈಲಿ, ವ್ಯಂಗ್ಯದ ಮೊನಚು, ವಿಶಿಷ್ಟ ನುಡಿಗಟ್ಟಿನ ಶಕ್ತಿಯನ್ನು ಕನ್ನಡದಲ್ಲಿ ಹಿಡಿದಿಡುವ ಕಷ್ಟದ ಕೆಲಸವನ್ನು ಲೇಖಕ ಟಿ. ಎಲ್. ಕೃಷ್ಣೇಗೌಡ ಯಶಸ್ವಿಯಾಗಿ ಮಾಡಿದ್ದಾರೆ. ಶೀರ್ಷಿಕೆ: [...]

ಸುವರ್ಣ ಕರ್ನಾಟಕ ವಿಜ್ಞಾನ ಬಾಗಿನ

ಜೀವದ ಹುಟ್ಟಿನ ನಿಜಸ್ಥಿತಿಯನ್ನು ವಿವರಿಸಿ, ನಿಮಗೆ ತಾಜಾ ಮಾಹಿತಿಯನ್ನೊದಗಿಸುತ್ತದೆ ಈ ಕಿರು ಪುಸ್ತಕ. ಸರಳವಾದ ಭಾಷೆ, ಕುತೂಹಲ ಕೆರಳಿಸುವ ಘಟನೆಗಳು ಹಾಗೂ ಸನ್ನಿವೇಶಗಳು, ನಿಮ್ಮ ಚಿಂತನೆಯನ್ನು ಕೆದಕುವಂತಹ ಮಂಡನೆ, ರೋಮಾಂಚಕಾರೀ ವೈಜ್ಞಾನಿಕ ಪತ್ತೇದಾರಿಯ ಸ್ವಾರಸ್ಯಮಯ ನಿರೂಪಣೆ, ವಿಜ್ಞಾನಿಗಳು ಅನುಭವಿಸಿದ ಕಷ್ಟ ನಷ್ಟಗಳು, ಅವರು ಪಟ್ಟ ಅವಮಾನ, ಅವರು ಎದುರಿಸಿದ ಘೋರ ಘರ್ಷಣೆಗಳು, ಕಾಲಾನುಕಾಲಕ್ಕೆ ಹೇಗೆ ಹೊಸ ಹೊಸ ವಿಜ್ಞಾನಿಗಳು ಅವತರಿಸಿ, ಕೆಚ್ಚಿನಿಂದ, ಕಿಚ್ಚಿನಿಂದ, ಈ ಚಕ್ರವ್ಯೂಹವನ್ನು ಭೇದಿಸಿ, ಮುನ್ನುಗ್ಗಿ, ಮೂಡನಂಬಿಕೆಗಳನ್ನು ಸಾರಾಸಗಟಾಗಿ ತರಿದು, ವೈಜ್ಞಾನಿಕ ಮನೋಭಾವವನ್ನು ಬೆಳೆಸಿದರು [...]

ಪಕಟವಾಗಿ ೧೫೦ ವರ್ಷಗಳಾಗಿದ್ದರೂ ಇನ್ನೂ ವಾದ ವಿವಾದವನ್ನು ಸೃಷ್ಟಿಸುತ್ತಿರುವ ಪುಸ್ತಕದ ಕರ್ತೃ

ಜಗತ್ತಿನಾದ್ಯಂತ ಶ್ರೇಷ್ಟ ವಿಜ್ಞಾನಿ ಮತ್ತು ವಿಕಾಸವಾದದ ತಜ್ಞ ಚಾರ್ಲ್ಸ್ ಡಾರ್ವಿನ್ ನ ದ್ವಿ ಶತಮಾನೋತ್ಸವವನ್ನು 2009ರಲ್ಲಿ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಡಾರ್ವಿನ್ ನ ವಿಚಾರವಾಗಿ ವಿಜ್ಞಾನ ಲೇಖಕರುಗಳು ಬರೆದು ಈಗಾಗಲೇ ಪ್ರಕಟವಾಗಿರುವ ಲೇಖನಗಳನ್ನು ಆಯ್ದು ಪುಸ್ತಕ ರೂಪದಲ್ಲಿ ಹೊರತಂದಿದ್ದಾರೆ `ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು‘. ಡಾರ್ವಿನ್ ನ ಕೃತಿ `ದಿ ಒರಿಜಿನ್ ಆಫ್ ಸ್ಪೀಸೀಸ್‘ ಪ್ರಕಟವಾಗಿ 150 ವರ್ಷಗಳಾಗಿದ್ದರೂ ಅದರ ಪರ ವಾದ ವಿವಾದಗಳು ನಡೆಯುತ್ತಿದ್ದು, ವಿಕಾಸವಾದಕ್ಕೆ ಗಟ್ಟಿ ಮೆರುಗನ್ನು ಆಧುನಿಕ ಜೀವರಾಸಾಯನಿಕ ವಿಜ್ಞಾನದಲ್ಲಿ ಕಾಣಲಾಗುತ್ತಿದೆ. ಡಾರ್ವಿನ್ [...]

Follow

Get every new post delivered to your Inbox.