ಮೇ ಡೇ ಚಿರಾಯುವಾಗಲಿ

ಶೀರ್ಷಿಕೆ: ಮೇ ಡೇ ಹುತಾತ್ಮದ ಮಹಾಗಾಥೆ  ಲೇಖಕರು:ವಿಲಿಯಂ ಆಡಲ್ ಮನ್  ಅನುವಾದ:ರಾಹು  ಪುಟಗಳು:278 ಬೆಲೆ:200/-

ಗಣಿಯಾಳದಲ್ಲಿ ಸಿಕ್ಕಿಹಾಕಿಕೊಂಡ 33 ಕಾರ್ಮಿಕರನ್ನು ಮೇಲಕ್ಕೆತ್ತಿದ ಅಭೂತಪೂರ್ವ ಘಟನೆಯ ದಾಖಲೆ ಕನ್ನಡದಲ್ಲಿ !

. . . ರಾಷ್ಟಪತಿ ಬಂದರೆಂಬ ಸುದ್ಧಿ ಕೇಳಿ ಎಲ್ಲಾ ಕ್ಯಾಮರಾಗಳೂ ಮಾಧ್ಯಮ ಕೇಂದ್ರಕ್ಕೆ ದೌಡಾಯಸಿದವು. ಅದುವರೆಗೆ ಸುರಕ್ಷಿತವಾಗಿ ಬಚ್ಚಿಟ್ಟಿದ್ದ ಕೆಂಪಕ್ಷರದ ಚೀಟಿ ಆಂಡ್ರೂ ಸುಗಾರೆಯ ಕೈ ದಾಟಿ ಈಗ ಪಿನೆರೊ ಕೈಗೆ ಬಂತು. ಆಳದಿಂದ ಬಂದ ಆ ಪುಟ್ಟ ಸಂದೇಶವನ್ನು ರಾಷ್ಟ್ರಪತಿ ಎತ್ತಿ ಹಿಡಿದು ಕ್ಯಾಮೆರಾಗಳಿಗೆ ಪ್ರದರ್ಶಿಸಿದರು. `ನಾವು 33 ಜನರೂ ಸುರಕ್ಷಿತವಾಗಿದ್ದೇವೆ’ ಎಂಬರ್ಥದ ಬರಹದ `ಲೋಸ್ 33′ (ಈ 33) ಎಂಬ ಪುಟ್ಟ ಪದ ಇಡೀ ಅಮೆರಿಕಾ ಖಂಡದ ಸಹಸ್ರಾರು ಟಿವಿ ಚಾನೆಲ್ ಗಳಲ್ಲಿ, [...]

ಅಕ್ಷರ ಕರ್ನಾಟಕ ಪುಸ್ತಕ ಮಳಿಗೆಗೆ ಬನ್ನಿ ಪುಸ್ತಕ ಖರೀದಿಸಿರಿ

ವಿಜಯನಗರದ ಸುತ್ತಮುತ್ತ ವಾಸಿಸುವವ ಸಾಹಿತ್ಯಾಸಕ್ತರಿಗೆ, ಓದುಗರಿಗೆ ಒಂದು ಸಂತೋಷದ ಸುದ್ದಿ. ಸಾಹಿತ್ಯಕ್ಕೆ ಸಂಬಂಧಪಟ್ಟ ಸಂವಾದ ಕಾರ್ಯಕ್ರಮವನ್ನು ತಿಂಗಳಿಗೊಂದು ಬಿಡದಂತೆ ನಡೆಸಿಕೊಂಡು ಬರುತ್ತಿದ್ದಾರೆ ಅಕ್ಷರ ಕರ್ನಾಟಕ ಪುಸ್ತಕ ಮಳಿಗೆ, ವಿಜಯನಗರ ಇವರು. ಇದರ ಸಾರಥ್ಯ ವಹಿಸಿದವರು ಖ್ಯಾತ ಪತ್ರಕರ್ತೆ ಆರ‍್.ಪೂರ್ಣಿಮಾ ಹಾಗೂ ಕರ್ನಾಟಕ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಸಿ.ವೀರಣ್ಣ ಅವರು. ಪ್ರತೀ ತಿಂಗಳು ಎರಡನೇ ಶನಿವಾರ ಅಥವಾ ಭಾನುವಾರ ಈ ಕಾರ್ಯಕ್ರಮ ಇರುತ್ತದೆ. ಡಾ. ಸಿದ್ದಲಿಂಗಯ್ಯ ಮತ್ತು ಮುಖ್ಯಮಂತ್ರಿ ಚಂದ್ರು ಅವರಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ಇದುವರೆಗೆ [...]

ಪುಸ್ತಕ ಬಿಡುಗಡೆಗೆ ಆಹ್ವಾನ

ಆತ್ಮೀಯರೆ, ಇದೇ ತಿಂಗಳ 26ರಂದು (26/04/2011) ಸಂಜೆ 6 ಗಂಟೆಗೆ ನನ್ನ ‘ನೆನಪುಗಳಿಗೇಕೆ ಸಾವಿಲ್ಲ’ - ಕಥಾಸಂಕಲನ ಹಾಗೂ ‘ಮಳೆಬಿಲ್ಲ ನೆರಳು’ - ವಿಜ್ಞಾನ ಲೇಖನಗಳ ಸಂಕಲನ ಬಿಡುಗಡೆಯಾಗುತ್ತಿದೆ. ಪುಸ್ತಕಗಳ ಬಿಡುಗಡೆ ಮತ್ತು ಅಧ್ಯಕ್ಷತೆ: ಡಾ.ಜಿ.ರಾಮಕೃಷ್ಣ ‘ನೆನಪುಗಳಿಗೇಕೆ ಸಾವಿಲ್ಲ’ ಕೃತಿ ಪರಿಚಯ: ಡಾ.ಕೆ.ವೈ.ನಾರಾಯಣಸ್ವಾಮಿ ‘ಮಳೆಬಿಲ್ಲ ನೆರಳು’ ಕೃತಿ ಪರಿಚಯ: ಶ್ರೀ ಅದ್ದೆ ಮಂಜುನಾಥ್ ಸ್ಥಳ: ನಯನ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಎಲ್ಲರಿಗೂ ಸ್ವಾಗತ ಪುಸ್ತಕ ಪರಿಚಯ ಇಲ್ಲಿದೆ: ಮಳೆಬಿಲ್ಲ ನೆರಳು- ವಿಜ್ಞಾನ ಲೇಖನಗಳ ಸಂಕಲನ ಪುಟಗಳು:244, ಬೆಲೆ ರೂ.150-00 ಪ್ರಕಾಶಕರು: ಬರಹ ಪಬ್ಲಿಶಿಂಗ್ [...]

ಸಂವಿಧಾನ ಶಿಲ್ಪಿ ಡಾ. ಬಿ.ಆರ‍್.ಅಂಬೇಡ್ಕರ‍್

ಭಾರತೀಯ ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಅದರ ಭಾಗವಾದ ಅಸ್ಪೃಶ್ಯತೆಯ ಪ್ರಶ್ನೆ ಮತ್ತೆ- ಮತ್ತೆ ಏಳುತ್ತಾ ಬಂದಿದೆ. ಇದರಲ್ಲಿ ಅಡಕವಾಗಿರುವ ಅಸಮಾನತೆ ಮತ್ತು ಶೋಷಣೆಯ ಅಂಶಗಳ ಮೇಲೆ ಚರ್ಚೆಗಳು, ಆಂದೋಲನಗಳು ನಡೆಯುತ್ತ ಬಂದಿವೆ. ಆಧುನಿಕ ಭಾರತದಲ್ಲಿ ಡಾ. ಅಂಬೇಡ್ಕರ್ ಅವರ ನೇತೃತ್ವದ ಹೋರಾಟ ಇಂತವುಗಳಲ್ಲಿ ಪ್ರಮುಖವಾದದ್ದು. ಈ ಅವಿರತ ಹೋರಾಟಗಾರ ದಲಿತ ವಿಭಾಗಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು, ಮೇಲ್ಜಾತಿ ಆಪಾಢಭೂತಿತನಗಳನ್ನು ಬಯಲಿಗೆಳೆದರು, ಸ್ವಾತಂತ್ರ್ಯ ಹೋರಾಟ ಕಾಲದಲ್ಲೂ, ನಂತರವೂ ಕಾಂಗ್ರೆಸ್ ಮತ್ತು ಅದರ ನೀತಿಗಳನ್ನು ಬಯಲಿಗೆಳೆದರು. ಆದರೆ ಅಂತಿಮವಾಗಿ ಹಿಂದೂ [...]

ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2009ನೇ ಸಾಲಿನ ಪುಸ್ತಕ ಬಹುಮಾನ ಮತ್ತು 2010ನೇ ಸಾಲಿನ ಗೌರವ ಪ್ರಶಸ್ತಿಗಳು ಪ್ರಕಟವಾಗಿವೆ.

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡುವ 2009ನೇ ಸಾಲಿನ ಪುಸ್ತಕ ಬಹುಮಾನ ಮತ್ತು 2010ನೇ ಸಾಲಿನ ಗೌರವ ಪ್ರಶಸ್ತಿಗಳು ಪ್ರಕಟವಾಗಿವೆ. ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಎಂ. ವೃಷಭೇಂದ್ರಸ್ವಾಮಿ, ವಿಮರ್ಶಕ ಡಾ.ಎಚ್.ಎಸ್. ರಾಘವೇಂದ್ರ ರಾವ್, ಲೇಖಕರಾದ ಡಾ.ಶ್ರೀಕಂಠ ಕೂಡಿಗೆ, ಕವಯತ್ರಿ ಪ್ರೊ.ಸ. ಉಷಾ ಮತ್ತು  ಲೇಖಕರಾದ ಕೋಟಿಗಾನಹಳ್ಳಿ ರಾಮಯ್ಯ ಅವರ ಜೀವಮಾನದ ಸಾಧನೆಯನ್ನು ಗುರುತಿಸಿ 2010ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇಲ್ಲಿನ `ಕನ್ನಡ ಭವನ’ದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಂ.ಎಚ್. ಕೃಷ್ಣಯ್ಯ [...]

ವಿಶ್ವ ಆರೋಗ್ಯದಿನದ ಶುಭಾಶಯಗಳೊಂದಿಗೆ

ಭಾರತದಲ್ಲಿ ಜನಾರೋಗ್ಯ ಸಾಧನೆ ದೇಶ ಸ್ವಾತಂತ್ರ್ಯ ಪಡೆದು ಆರು ದಶಕಗಳೇ ಕಳೆದರೂ ಸಾಧ್ಯವಾಗದಿರುವುದು ವಿಷಾದದ ಸಂಗತಿ. ನಮ್ಮ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮೀಸಲಿಡುವ ಹಣ ಬಹಳ ಕಡಿಮೆ. ಬಡತನ, ಅನಕ್ಷರತೆ ಹೆಚ್ಚಾಗಿರುವ ಈ ದೇಶದಲ್ಲಿ ಸಹಜವಾಗಿಯೇ ರೋಗರುಜಿನಗಳು ಕೂಡ ಅಧಿಕ. ಔಷಧಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿರುವುದರಿಂದ ಮತ್ತು ಸರ್ಕಾರವೂ ಕೂಡ ಖಾಸಗೀಕರಣ ನೀತಿಗೆ ಪ್ರೋತ್ಸಾಹ ಕೊಡುತ್ತಿರುವುದರಿಂದ ರೋಗ ಚಿಕಿತ್ಸೆಗೆ ತಗಲುವ ವೆಚ್ಚಕ್ಕಿಂತ ರೋಗಪತ್ತೆಯ ವಿಧಾನಗಳಿಗೆ ಜನತೆ ಹಣ ಹೆಚ್ಚು ಖರ್ಚು ಮಾಡಬೇಕಾದ ಅನಿವಾರ್ಯತೆ ಸೃಷ್ಟಯಾಗಿದೆ. ಗ್ರಾಮೀಣ [...]

Follow

Get every new post delivered to your Inbox.