ಹುತಾತ್ಮ ದಿನದ ಸಂದರ್ಭದಲ್ಲಿ ಅಮರ ಹುತಾತ್ಮ ಭಗತ್ ಸಿಂಗರ ಜೈಲಿನ ದಿನಚರಿ

1931 ರ ಮಾರ್ಚ್ 23. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಭಾರತೀಯರ ಪಾಲಿಗೆ ಅತ್ಯಂತ ದುಃಖದಾಯಕ ದಿನ. ಅಂದು ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳನ್ನು ಬ್ರಿಟಿಷ್ ಸರ್ಕಾರ  ನೇಣಿಗೇರಿಸಿದ ದಿನ. ಇಂದಿಗೂ ಭಗತ್ ಸಿಂಗ್ ಹುತಾತ್ಮನಾಗಿರದಿದ್ದರೆ ಈಗ ಇಷ್ಟು ವರ್ಷದ ಹಿರಿಯರಾಗಿರುತ್ತಿದ್ದರು ಅಯ್ಯೋ, ಆ ದಿನ ಕ್ಯಾಲೆಂಡರಿನಲ್ಲೇ ಇರಬಾರದಿತ್ತು ಎಂದು ದೇಶಭಕ್ತ ಭಾರತೀಯರು (ಹಿರಿಯ ಕಿರಿಯರೆನ್ನದೆ) ಹಂಬಲಿಸುವ ದಿನ. ಅವರ ಬಗ್ಗೆ ನೆನಸುವ ದಿನ. ಇವತ್ತು ಲೆಫ್ಟ್ ವರ್ಡ ಹೊರತಂದಿರುವ The Jail Notebook and Other Writings [...]

ನೈತಿಕ ಅಳುಕಿನೊಂದಿಗೇ. . .

ಶೀರ್ಷಿಕೆ: ಸದ್ಯ ಮತ್ತು ಶಾಶ್ವತ  ಲೇಖಕರು:ಯು. ಆರ್. ಅನಂತಮೂರ್ತಿ  ಪ್ರಕಾಶಕರು: ಅಂಕಿತ ಪ್ರಕಾಶನ  ಪುಟಗಳು:237  ಬೆಲೆ:ರೂ.150/- ಕೃಪೆ: ದೇಶ ಕಾಲ ವಿಶೇಷ

ಆತ್ಮಕಥೆಯೋ ಕಾದಂಬರಿಯೋ!

ಗಾಂಧಿ ಕ್ಲಾಸ್’ ಕೃತಿಯನ್ನು ಓದಿದ ನಂತರ ನನಗೆ ಬಂದ ಸಂದೇಹ ಇದು: ಕುಂವೀ ಮರೆತು ಆತ್ಮಕತೆಯ ಬದಲಿಗೆ ತಾವು ಬರೆದಿರುವ ಹೊಸ ಕಾದಂಬರಿಯೊಂದನ್ನು ನನಗೆ ಕಳುಹಿಸಿದ್ದಾರೆಯೇ? ಇಷ್ಟು ರೋಚಕ ನಿರೂಪಣೆ, ಇಷ್ಟು ರಂಜಕ ಹಾಗೂ ಅಸಾಧಾರಣ ಘಟನೆಗಳು ಕಾದಂಬರಿಯಲ್ಲಲ್ಲದೆ ಆತ್ಮಕಥೆಯಲ್ಲಿರಲು ಸಾಧ್ಯವೆ? ಉದಾಹರಣೆಗೆ: ಕೇವಲ ತನ್ನ ಸುಯೋಧನ-ಛಲದಿಂದಾಗಿ ಸಾಕಷ್ಟಿದ್ದ ಸ್ಥಿರ-ಚರಾಸ್ತಿಗಳನ್ನು ಕಳೆದುಕೊಂಡು ಅಹನಹ್ಯನಿಗೆ ಒದ್ದಾಡುವ ಸ್ಥಿತಿಗೆ ಬಂದ `ಹೀರೋ’ ತಂದೆಯ ಮಗನಾಗಿ, ಅನೇಕರ ಸಹಾಯದಿಂದ, ಅತಿ ಕಷ್ಟದಿಂದ ಎಸ್.ಎಸ್.ಎಲ್.ಸಿ. ಪಾಸಾಗಿ ಕೆಲಸವಿಲ್ಲದೆ ಸೈನ್ ಬೋರ್ಡ ಪೇಂಟರ್ ಆಗುವ, [...]

ಒಂದು ಅಸಮಗ್ರ ಆತ್ಮಕಥನ

  ಹಿರಿಯ ಕವಿ ಜಿ. ಎಸ್. ಶಿವರುದ್ರಪ್ಪ ತಮ್ಮ ಆತ್ಮಕಥೆಯನ್ನು ಪ್ರಕಟಿಸಿದ್ದಾರೆ. ಬಹು ಹಿಂದೆಯೇ ಪ್ರಕಟವಾದ ಈ ಪುಸ್ತಕ ಈಗ ಮೂರನೆಯ ಮುದ್ರಣವನ್ನು ಕಂಡಿದೆ. ಇದನ್ನು ಜಿ. ಎಸ್. ಎಸ್. `ಒಂದು ಅಸಮಗ್ರ ಆತ್ಮಕಥನ’ ಎಂದು ಕರೆದುಕೊಂಡಿದ್ದಾರೆ. ಏಕೆಂದರೆ ಕವಿಗಳೇ ಹೇಳಿಕೊಂಡಂತೆ, `ನನ್ನನ್ನು ಕುರಿತು ನಾನು ನಿಸ್ಸಂಕೋಚವಾಗಿ ಹೇಳಿಕೊಳ್ಳಲಾಗದ ಅನೇಕ ನಿರ್ಬಂಧಗಳಲ್ಲಿ – ಅವು ವೈಯಕ್ತಿಕವಾಗಿರಬಹುದು, ಸಾಮಾಜಿಕವಾಗಿರಬಹುದು, ಸಾಂಸ್ಕೃತಿಕವಾಗಿರಬಹುದು – ನಾನು ಹಾಗೂ ನನ್ನಂಥವರು ಬದುಕುತ್ತಿದ್ದೇವೆ ಎಂಬ ಕಾರಣದಿಂದ; ಮತ್ತು ಒಬ್ಬ ಸೃಜನಶೀಲ ಲೇಖಕ ವಾಸ್ತವವಾಗಿ ತನ್ನ [...]

ವಿಮೋಚನೆಯ ಸಮರದ ಅನುಭವ ಮತ್ತು ನೆನಪು

 ತಮ್ಮ ಹದಿನಾಲ್ಕನೆಯ ವಯಸ್ಸಿಗೇ ಬ್ರಿಟೀಷರ ವಿರುದ್ಧ ಪ್ರತಿಭಟಿಸುವ ಮನೋಭಾವವನ್ನು ಗಟ್ಟಿಗೊಳಿಸಿಕೊಂಡು ಮುಂದಡಿ ಇಟ್ಟ ಮೇಜರ‍್ ಜೈಪಾಲ್ ಸಿಂಗ್ ರವರ ನೆನಪುಗಳನ್ನು ಮಂಡಿಸುವ ಪುಸ್ತಕ `ವಿಮೋಚನೆಯ ಸಮರದಲ್ಲಿ’. ಜೈಪಾಲ್ ಸಿಂಗ್ ರವರು ಉತ್ತರ ಪ್ರದೇಶದವರು. ಅಲ್ಲಿಯ ಮುಜಾಪುರ‍್ ನಗರ ಜಿಲ್ಲೆಯ ಒಂದು ಹಳ್ಳಿಯ ಬಡ ಜಾಟ್ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದ ಜೈಪಾಲ್ ಸಿಂಗ್, ಜಾಟ್ ಜನಾಂಗದ ಹುಮ್ಮಸ್ಸು, ಎದೆಗಾರಿಕೆ, ಆಕ್ರೋಶ, ಮೈಕಟ್ಟನ್ನು ಹಾಗೇ ಸ್ವಾಭಿಮಾನವನ್ನು ಪ್ರತಿಬಿಂಬಿಸುವಂತಿದ್ದರು. ಅವರು ಬೆಳೆಯುತ್ತಾ ಬಂದಂತೆ ಆಗಿನ ದಿನಗಳಲ್ಲಿ ಬ್ರಿಟೀಷರನ್ನು ಬಗ್ಗು ಬಡಿಯಲು [...]

ಅಕ್ಕ ಕೇಳವ್ವ ನಾನೊಂದು ಕನಸ ಕಂಡೆ

ಮನಸೂರೆ ಮನಸೂರೆ ಹೋಯಿತೋ ಹೋ ಇದ್ದಕ್ಕಿದ್ದಂತೆ ಈ ಗೀತೆ ಹಾಡಿದುದು ಹೊಸ ಸಪ್ನ ಬಿದ್ದಂತೆ ಅಂತೆ, ಇಂತೆ, ಎನ್ನುತ್ತಾ ಮನಮೀರಿ ನಾನಿಂತೆ. ಕಳಚಿ ಬಿದ್ದಿತು ಗೆಳೆಯ ಜಗದ ಸಂತೆಯ ಚಿಂತೆ ಮಲ್ಲಿಕಾರ್ಜುನ ಮನ್ಸೂರರ ಗಾಯನ ಕೇಳಿ ಬೇಂದ್ರೆ ಬರೆದ ಸಾಲುಗಳಿವು. ಈ ಗಾನಜೀವನದ ಮಹೋತ್ಸವದ ಗಳಿಗೆಗಳನ್ನು ಕುರಿತು ಮನ್ಸೂರರು 1983ರಲ್ಲೇ ಬರೆದಿದ್ದರು. ಆ ಅನುಭವದ ಸವಿಬುತ್ತಿಗಂಟಿಗೆ `ನನ್ನ ರಸಯಾತ್ರೆ‘ ಎಂದು ಹೆಸರಿಟ್ಟಿದ್ದರು. ಅದೀಗ 25 ವರುಷಗಳ ನಂತರ ಮರುಮುದ್ರಣ ಕಾಣುತ್ತಿದೆ. ಮನ್ಸೂರರನ್ನು ಈ ಕೃತಿ ಬರೆಯುವಂತೆ ಒತ್ತಾಯಿಸಿದವರು [...]

ಗುಲಾಮ ಪದ್ಧತಿಯ ವಿರುದ್ಧ ಸೆಣಸಿದ ಕಪ್ಪು ಮಹಿಳೆಯರ ಆತ್ಮಕತೆಗಳು

ಗುಲಾಮ ಪದ್ಧತಿಯ ವಿರುದ್ಧ ಸೆಣಸಿದ ಕಪ್ಪು ಮಹಿಳೆಯರ ಆತ್ಮಕಥೆಗಳ ಸಂಕಲನವೇ ‘ಕಪ್ಪು ಹಕ್ಕಿಯ ಬೆಳಕಿನ ಹಾಡು‘ ಪುಸ್ತಕ. ಇಲ್ಲಿನ ಆತ್ಮಕಥೆಗಳನ್ನು ಎಂ.ಆರ್. ಕಮಲ ಕನ್ನಡಕ್ಕೆ ಅನುವಾದಿಸಿದ್ದಾರೆ. ಗುಲಾಮಗಿರಿಯ ಇತಿಹಾಸ, ಅಂದಿನ ರಾಜಕೀಯ ಸನ್ನಿವೇಶ, ಗುಲಾಮರ ಆತ್ಮಕಥೆಗಳನ್ನು ಒಳಗೊಂಡಿರುವ ಪುಸ್ತಕವೊಂದು ಕನ್ನಡದಲ್ಲಿ ಪ್ರಕಟವಾಗುತ್ತಿರುವುದು ಇದೇ ಮೊದಲಬಾರಿಯಾಗಿದೆ. ಇಲ್ಲಿ ಅನುವಾದಿಸಲಾದ ಎಲ್ಲ ಆತ್ಮಕಥೆಗಳು ಹೆಣ್ಣುಮಕ್ಕಳದು ಅನ್ನುವುದು ಈ ಪುಸ್ತಕದ ಮಹತ್ವವನ್ನು ಇನ್ನಷ್ಟು ಹೆಚ್ಚಿಸಿದೆ. ಕಪ್ಪು ಜನಾಂಗ ಸೃಷ್ಟಿಸಿರುವ ಆತ್ಮಕಥೆಗಳು ಐತಿಹಾಸಿಕ ಮಹತ್ವ ಪಡೆದ ಸಾಹಿತ್ಯ-ಸಮಾಜಶಾಸ್ತ್ರೀಯ-ಸಾಂಸ್ಕೃತಿಕ ಸಂವಾದಿ ದಾಖಲೆಗಳಾಗಿವೆ. ಬಿಡುಗಡೆಗಾಗಿ ಅವರು [...]

ಅಮೃತಾ ಪ್ರೀತಂ ಆತ್ಮಕಥೆ

ಶೀರ್ಷಿಕೆ: ರಸೀದಿ ತಿಕೀಟು ಲೇಖಕರು: ಅಮೃತಾ ಪ್ರೀತಂ ಅನು:ಹಸನ್ ನಯೀಂ ಸುರಕೋಡ ಪ್ರಕಾಶಕರು : ಲೋಹಿಯಾ ಪ್ರಕಾಶನ ಪುಟಗಳು : 206 ಬೆಲೆ:ರೂ.100/-

ವೃತ್ತಿ ರಂಗಭೂಮಿ ಕಲಾವಿದೆಯ ಆತ್ಮಚರಿತ್ರೆ

ವೃತ್ತಿ ರಂಗಭೂಮಿ ಕಲಾವಿದೆಯಾಗಿರುವ ಅನ್ನಪೂರ್ಣ ಸಾಗರ ಅವರ ಆತ್ಮಚರಿತ್ರೆ ಇದು. ನಮ್ಮಲ್ಲಿ ಹೆಣ್ಣುಮಕ್ಕಳು ಆತ್ಮಕಥೆಯನ್ನು ಮುಕ್ತವಾಗಿ ಬರೆಯಲು ಹಿಂಜರಿಯುವ ಹಾಗೂ ಆತ್ಮಕಥೆಗಳೇ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಅನ್ನಪೂರ್ಣರ ಆತ್ಮಚರಿತ್ರೆ ಕುತೂಹಲಕರವಾಗಿದೆ. ಬಣ್ಣದ ಬದುಕನ್ನೇ ನಂಬಿ ಬದುಕುವವರ ಜೀವನ ಸಮಾನ್ಯವಾದುದಲ್ಲ. ಇಂಥ ಸಂದರ್ಭದಲ್ಲಿ ಹೆಣ್ಣೊಬ್ಬಳು ಹಾದು ಬಂದ ದಾರಿ ಸರಳರೇಖೆಯಿಂದೇನೂ ಇರುವುದಿಲ್ಲ. ಇಂಥದ್ದರಲ್ಲಿ `ಎಚ್ಚರ ತಂಗಿ ಎಚ್ಚರ‘ ಎಂಬ ನಾಟಕದಿಂದ ಮನೆಮಾತಾದ ಅನ್ನಪೂರ್ಣ ತಮ್ಮ ಬದುಕಿನ ಅನೇಕ ಹೃದಯಮುಟ್ಟುವ ಚಿತ್ರಗಳನ್ನು ಕೊಟ್ಟಿದ್ದಾರೆ. ಇದಕ್ಕೆ ಗವೀಶ ಹಿರೇಮಠರ ಸರಳ ನಿರೂಪಣೆ ಕೂಡಾ [...]

ಎಂ ಎಸ್ ಶ್ರೀರಾಮ್ ಅಭಿಪ್ರಾಯದಲ್ಲಿ ಚೆ ಯ ಮೋಟರ್ ಸೈಕಲ್ ಡೈರಿ

ಕೆಲವು ದಿನಗಳ ಹಿಂದೆ `CHE‘ coming to India ಅಂತ ಒಂದು ಮೈಲ್ ಬಂದಿತ್ತು. `CHE the Golden Palm nominee at Cannes 2008 that won Del Toro the Best Actor Award ಅನ್ನೋ ತಲೆ ಬರಹ ಇರೋ http://dearcinema.com ನಲ್ಲಿ ಬಂದ ಲೇಖನ ಅದಾಗಿತ್ತು. ಅದನ್ನು ಓದಿದ ನಂತರ `CHE‘ ಬಗ್ಗೆ ಅಂತರ್ಜಾಲ ತಾಣಗಳಲ್ಲಿ ಹುಡುಕುತಿದ್ದಾಗ http://kannada-kathe.blogspot.com ನಲ್ಲಿ 2 ವರ್ಷಗಳ ಹಿಂದೆ ಬರೆದ ಲೇಖನ ಸಿಕ್ಕಿತು. ಓದಿ ಖುಷಿಯಾಯಿತು. ಪುಸ್ತಕದ ಬಗ್ಗೆ [...]

Follow

Get every new post delivered to your Inbox.