ದೇಶಕ್ಕೆ ಸ್ವಾತಂತ್ರ್ಯ ಬಂದರೂ ಕವಡೇಪುರಕ್ಕೆ ಸ್ವಾತಂತ್ರ್ಯ ಬಂದಿಲ್ಲರೀ

ಶೀರ್ಷಿಕೆ:ಕವಡೆಪುರದ ಕೌರವರು ಲೇಖಕರು: ವೈ.ಎಸ್. ಹರಗಿ ಪ್ರಕಾಶಕರು: ಶ್ರೀನಿವಾಸ ಪುಸ್ತಕ ಪ್ರಕಾಶನ ಪುಟ: 344 ಬೆಲೆ:ರೂ.170/-

ವಸ್ತು ನಿಷ್ಟ ನಿಲುವಿನ ಬರವಣಿಗೆ

ಶೀರ್ಷಿಕೆ: ಹಳ್ಳ ಬಂತು ಹಳ್ಳ       ಲೇಖಕರು:ಶ್ರೀನಿವಾಸ ವೈದ್ಯ     ಪ್ರಕಾಶಕರು:ಮನೋಹರ ಗ್ರಂಥಮಾಲಾ ಪುಟಗಳು:281  ಬೆಲೆ:ರೂ.200/- ಕೃಪೆ: ದೇಶ ಕಾಲ ವಿಶೇಷ

ನಿರಂಜನರ ಮೂಲಕ ಕಯ್ಯೂರು ಕಲಿಗಳು, ಕಯ್ಯೂರು ಕಲಿಗಳ ಮೂಲಕ ನಿರಂಜನರು ಚಿರಸ್ಮರಣೀಯರು.

ನಿರಂಜನರ ಮೂಲಕ ಕಯ್ಯೂರು ಕಲಿಗಳು, ಕಯ್ಯೂರು ಕಲಿಗಳ ಮೂಲಕ ನಿರಂಜನರು ಚಿರಸ್ಮರಣೀಯರು. ಕಯ್ಯೂರು ಹೋರಾಟಕ್ಕೆ ಸಂಬಂಧಿಸಿದಂತೆ 60 ಜನರನ್ನು ಬಂಧಿಸಿ ಮಂಗಳೂರಿಗೆ ತಂದಿದ್ದರು ವಿಚಾರಣೆಗಾಗಿ…… ಸೆರೆಮನೆಯಲ್ಲಿ ಆ ಕೈದಿಗಳನ್ನು ಭೇಟಿಯಾದೆ. ಧೀರ್ಘ ವಿಚಾರಣೆಯ ವೇಳೆ ವರದಿಗಾರನಾಗಿ ಪ್ರತಿ ದಿನವೂ ಅವರ ಸಾಮಿಪ್ಯದ ಸವಿಯುಂಡೆ. ಆ ವಿಚಾರಣೆ ಭಾರೀ ನಾಟಕ. ಅದರ ಭೀಕರತೆ ಸ್ಪಷ್ಟವಾದದ್ದು ನ್ಯಾಯಮೂರ್ತಿ ತೀರ್ಪು ನೀಡಿದ ದಿನ. ನಾಲ್ವರಿಗೆ ಮರಣದಂಡನೆ. ನಾನು ನೋಡನೋಡುತ್ತಿದ್ದಂತೆಯೇ ಕಯ್ಯೂರಿನ ಶೋಷಿತರು ಇತಿಹಾಸ ರಚಿಸಿದ್ದರು, ಕಥೆಯಾಗಿದ್ದರು, ದಂತಕಥೆಯಾಗಿದ್ದರು. `ಚಿರಸ್ಮರಣೆ’ ಒಂದು ಕಾದಂಬರಿ, [...]

ಅವಳಿಗೆ ಸಿಕ್ಕಂಥ ಶಾಲೆ ನಮಗೇಕೆ ಸಿಗಲಿಲ್ಲ?!

ಇವಳು `ತುಂಗಾ’ ಅಲ್ಲ ಗಾಯತ್ರಿ. . . ಜಪಾನಿನ ಟೆಲಿವಿಷನ್ ಕ್ಷೇತ್ರದ ದೊಡ್ಡ ಹೆಸರು ತೆತ್ಸುಕೋ ಕುರೋಯಾನಾಗಿ. `ಸರಿಯಾದ’ ಶಾಲೆ ಪಡೆಯಲು ಆಕೆ (ಆಕೆಯ ತಾಯಿ) ಪಟ್ಟ ಬವಣೆಯೇ `ತೊತ್ತೋಚಾನ್’ ಕಾದಂಬರಿಯಾಗಿ ಮೂಡಿ ಬಂದಿದೆ. ಇಡೀ ಜಗತ್ತನ್ನು ಇನ್ನಿಲ್ಲದಂತೆ ಕಾಡಿದ ಕೃತಿ ಇದು. ಈ ಕೃತಿಯನ್ನು ಕನ್ನಡಕ್ಕೆ ತಂದದ್ದು ವಿ. ಗಾಯತ್ರಿ. ಈಗ ಅದೇ `ತೊತ್ತೋಚಾನ್’ ನಿಂದ ಪ್ರೇರಣೆ ಪಡೆದ, ಅದೇ ಎಳೆ ಹೊಂದಿರುವ `ತುಂಗಾ’ವನ್ನು ನಮ್ಮೆದುರು ಇಡುತ್ತಿದ್ದಾರೆ. ಒಂದು ಘಟ್ಟದವರೆಗೆ ಆತ್ಮ ಕಥಾನಕ ಎನಿಸುವ ಈ [...]

ಹನ್ನೆರಡರ ಹುಡುಗ

ಇಟೆಲಿಯ ಪತ್ರಕರ್ತ, ಬರಹಗಾರ ಇಟಾಲೋ ಕಾಲ್ವಿನೋನ ‘ಬ್ಯಾರನ್ ಇನ್ ದಿ ಟ್ರೀಸ್’ ಕಾದಂಬರಿಯನ್ನು ಕೆ.ಪಿ.ಸುರೇಶ ಕನ್ನಡಕ್ಕೆ ತಂದಿದ್ದಾರೆ. ಹನ್ನೆರಡು ವರುಷದ ಹುಡುಗನೊಬ್ಬನ ಸಾಕ್ಷೀ ಪ್ರಜ್ಞೆಯಲ್ಲಿ ನಿರೂಪಿತವಾಗಿರುವ ಕತೆ ಇದು. ‘ಕಾಡು ಮತ್ತು ನಾಡುಗಳ ಮಧ್ಯೆ ಚಲಿಸುತ್ತಾ ಎರಡರಿಂದಲೂ ಬೆಳೆಯುತ್ತಿರುವ ಕನ್ನಡ ಕವಿ’ ಕೆ.ಪಿ.ಸುರೇಶ್ ಅನುವಾದವನ್ನು ಎಚ್.ಎಸ್. ರಾಘವೇಂದ್ರರಾವ್ ಅತಿಯಾಗಿ ಮೆಚ್ಚಿಕೊಂಡಿದ್ದಾರೆ. ‘ಕನ್ನಡ ಕಾದಂಬರಿಗಳ ಈಚಿನ ಚಪಲಗಳನ್ನು ಮೀರಿ, ಬರವಣಿಗೆಯ ಹೊಸ ಸಾಧ್ಯತೆಗಳನ್ನು ಶೋಧಿಸುವ ಈ ಅನುವಾದ ನನಗೆ ಖುಷಿ ಕೊಟ್ಟದೆ‘ ಎಂದಿದ್ದಾರೆ. ಈಚಿನ ಚಪಲಗಳ ಬಗ್ಗೆ ಅವರೊಂದಷ್ಟು [...]

ವೇಣು ನಿನಾದ

1981 ರಲ್ಲಿ ಪ್ರಕಟವಾದ ‘ಗಂಡುಗಲಿ ಮದಕರಿನಾಯಕ‘ ಕಾದಂಬರಿಯನ್ನು ಚಿತ್ರದುರ್ಗ ಸಾಹಿತ್ಯ ಸಮ್ಮೇಳನದ ನಿಮಿತ್ತ, ಮರುಮುದ್ರಣ ಮಾಡಿದ್ದಾರೆ. ಇದು ನಾಲ್ಕನೆಯ ಮುದ್ರಣ. ಸಾಹಿತ್ಯ ಸಮ್ಮೇಳನದಲ್ಲಿ ಈ ಕಾದಂಬರಿಯ 748 ಪ್ರತಿಗಳು ಮಾರಾಟವಾಗಿವೆ ಎನ್ನುತ್ತಾರೆ ಪ್ರಕಾಶಕರು. ದಲಿತ, ಬಂಡಾಯ, ಸಸ್ಪೆನ್ಸ್, ಪಾಲಿಟಿಕ್ಸ್, ಡೀಪ್ ಲವ್, ಐತಿಹಾಸಿಕ, ಕೌಟುಂಬಿಕ, ಸಂಗೀತ, ನೃತ್ಯ- ಯಾವ ಪ್ರಕಾರವನ್ನೇ ಆರಿಸಿಕೊಂಡರೂ ಅಧ್ಯಯನ ಮಾಡಿ ವಸ್ತುನಿಷ್ಟವಾಗಿಯೂ ಬರೆವ ವೇಣು ಯಾವುದೇ ಲೇಬಲ್ ಅಂಟಿಸಿಕೊಳ್ಳದ ಸೃಜನಶೀಲ ಬರಹಗಾರರು. ಐತಿಹಾಸಿಕ ಕಾದಂಬರಿಗಳ ಅವನತಿಯ ಕಾಲದಲ್ಲಿ ಓಯಸ್ಸಿಸ್ ನಂತೆ ದುರ್ಗದ ಇತಿಹಾಸ [...]

ಈ ಶಾಲೆ ನನಗೆ ಇಷ್ಟವಾಯಿತು

“ಈಗ ನೀನು ಈ ಶಾಲೆಯ ವಿದ್ಯಾರ್ಥಿನಿ” ಎಂದು ಮುಖ್ಯೋಪಧ್ಯಾಯರು ಹೇಳಿದ ಮೇಲೆ ತೊತ್ತೊ-ಚಾನ್ ನಾಳೆ ಬೆಳಗಾಗುವುದನ್ನೇ ಕಾಯ್ದಳು. ಈ ಮೊದಲು ಆಕೆ ಎಂದೂ ಹಾಗೆ ಕಾಯ್ದಿರಲಿಲ್ಲ. ಪುಟ್ಟ ತೊತ್ತೊ-ಚಾನ್ ತೊಮೊಯೆ ಗಾಕುಯೆನ್ ಶಾಲೆಯ ವಾತಾವರಣ ತಾನು ಹಾಗೂ ತನ್ನ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಇಷ್ಟವಾಗಬೇಕು ಹಾಗೂ ಸಮವಸ್ತ್ರ ಮತ್ತು ಪಠ್ಯಕ್ರಮಕ್ಕಿಂತ ಮಕ್ಕಳಿಗೆ ಬೇಕಾದ ಸ್ವಾದಿಷ್ಟ ಊಟದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮುಖ್ಯೋಪದ್ಯಾಯರು ಇರಬೇಕು ಎಂದು ಆಶಿಸಿದ್ದಳು. ಅಲ್ಲಿ ಎಲ್ಲ ಮಕ್ಕಳು ಸಂಗೀತ ಕಲಿಯುತ್ತಿದ್ದರು, ಆಟವಾಡುತ್ತಿದ್ದರು, ಬೇಸಿಗೆಯಲ್ಲಿ [...]

ಶಿಕ್ಷಣದ ಮೂಲಕ ಬದಲಾವಣೆ

ಹೊಸ ಪೀಳಿಗೆಯಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಶಿಕ್ಷಕ ವೃತ್ತಿಗೆ ಹೊರತಾದ ವಿಭಿನ್ನ ಕ್ಷೇತ್ರಗಳಲ್ಲಿದ್ದು ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಂಡಿರುವ ಯುವಕರ ಬರವಣಿಗೆಗಳನ್ನು ಐದು ವರ್ಷಗಳಿಂದ ಪ್ರಕಟಿಸುತ್ತಿರುವ ಛಂದ ಪುಸ್ತಕ ಹೊರತಂದ ಕೃತಿ ಇದು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಹುದ್ದೆಯಲ್ಲಿದ್ದು ಸದ್ಯ ಪೂರ್ವ ಆಫ್ರಿಕಾದ ತಾಂಜಾನಿಯದಲ್ಲಿ ವಾಸವಿರುವ ಪ್ರಶಾಂತ್ ಬೀರೂರು ಚಿಕ್ಕಣ್ಣ ದೇವರು (ಪ್ರಶಾಂತ್ ಬೀಚಿ) ಅವರು ಈ ಕೃತಿಯನ್ನು ಅನುವಾದಿಸಿದ್ದಾರೆ. ಮೂಲ ಲೇಖಕ ಹೆನ್ರಿ ಆರ್. ಓಲೆ ಕುಲೆಟ್ ಕೀನ್ಯಾ ದೇಶದ ಜನಪ್ರಿಯ ಕಾದಂಬರಿಕಾರ. ಆಫ್ರಿಕಾದ ಬುಡಕಟ್ಟುಗಳಲ್ಲಿ ಒಂದಾದ [...]

ಬೆಸ್ಟ್ ಸೆಲ್ಲರ್ ಕಿತ್ತಳೆ!

`ಅದೃಷ್ಟಕ್ಕೆ ಎಂಬಂತೆ ನಮಗೆ ದಕ್ಕಿದ ಈ `ಕಾಫಿ ನಾಡಿನ ಕಿತ್ತಳೆ‘ಯಲ್ಲಿ ಮಲೆನಾಡಿನ ಬದುಕಿನ ನವರಸಗಳೆಲ್ಲ ಮೇಳವಿಸಿವೆ. ಕವಿ ವಿ.ಜಿ.ಭಟ್ಟರ ಕಲ್ಪನೆಯ ಹತ್ತನೆಯ ರಸ (ಶುಷ್ಕರಸ) ಇಲ್ಲಿ ಲವಲೇಶವೂ ಕಾಣುತ್ತಿಲ್ಲ. ಕೆಲವೆಡೆ ಸಾಕ್ಷ್ಯಚಿತ್ರದಂತೆ, ಕೆಲವೆಡೆ ಕಾಲ್ಪನಿಕ ಕತೆಯಂತೆ, ಇನ್ನು ಕೆಲವೆಡೆ ಹಾಸ್ಯದ ಲಹರಿಯಂತೆ ಈ ಕೃತಿ ಪ್ರತಿ ಪುಟದಲ್ಲೂ ರೂಪ ಲಕ್ಷಣಗಳನ್ನು ಬದಲಾಯಿಸಿಕೊಳ್ಳುತ್ತಾ, ಮಲೆನಾಡಿನ ಮಳೆಗಾಲದ ಹಳ್ಲಗಳಂತೆ ಒಮ್ಮೆ ಧಾವಿಸುತ್ತಾ, ಒಮ್ಮೆ ನಿಧಾನಕ್ಕೆ ಜುಳುಜುಳಿಸುತ್ತ, ಮರುಕ್ಷಣವೇ ಧುಮ್ಮಿಕ್ಕುತ್ತ, ಮತ್ತೆ ಕೆಲವೊಮ್ಮೆ ಅನಿರೀಕ್ಷಿತವಾಗಿ ಹ್ರಸ್ವವಾಗುತ್ತ ಸಾಗುತ್ತದೆ. ಆರ್.ಕೆ.ನಾರಾಯಣರ `ಮಾಲ್ಗುಡಿ ಡೇಯ್ಸ್‘ [...]

ಕಣ್ಣಂಚಿನ ಕಂಬನಿ

ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಆಳವಾದ ಪರಿಶ್ರಮ ಹೊಂದಿರುವವರು, ವೃತ್ತಿಯಲ್ಲಿ ಕನ್ನಡ ಪ್ರಾಧ್ಯಪಕಿ, ಪ್ರವೃತ್ತಿಯಲ್ಲಿ ಲೇಖಕಿ ಮತ್ತು ಗಾಯಕಿ ಎಂದು ಪರಿಚಯವಿರುವ ಯಾರಾದರೂ ಡಾ.ಅನಸೂಯಾದೇವಿಯವರನ್ನು ಗುರುತಿಸಬಹುದು. ಅವರ ಕೃತಿಯೇ `ಕಾಳ ಬೆಳದಿಂಗಳು‘. ಬದುಕು ಎಸೆಯುವ ಸಂಕೀರ್ಣಮಯ ಸವಾಲುಗಳಿಗೆ ಒಡ್ಡಿಕೊಂಡು ಕಣ್ಣಂಚಿನಲ್ಲಿಯ ಕಂಬನಿಯೊಂದಿಗೇ ಹೋರಾಟದಲ್ಲಿ ತೊಡಗಿ ತಮ್ಮದೇ ಆದ ಧೀಶಕ್ತಿಯಲ್ಲಿ ಎದ್ದುನಿಲ್ಲುವ ಇಲ್ಲಿನ ಸ್ತ್ರೀ ಪಾತ್ರಗಳು ನಮ್ಮ ಮನ ಕಲಕುತ್ತವೆ. ಓದಲು ಕೈಗೆತ್ತಿಕೊಂಡರೆ ಕೆಳಗಿಡಲಾಗದಂತೆ ಚಿತ್ತಾಪಹಾರಿಯಾಗಿರುವ ಕೃತಿ `ಕಾಳ ಬೆಳದಿಂಗಳು‘ ಎಂದು ಪ್ರಕಾಶಕರು ಅಭಿಪ್ರಾಯ ಪಡುತ್ತಾರೆ. ಡಾ.ಅನಸೂಯಾದೇವಿಯವರ ಲೇಖನಿಯಿಂದ ಮತ್ತಷ್ಟು [...]

Follow

Get every new post delivered to your Inbox.