ಅಪರಾಧ, ಪೊಲೀಸರು ಹಾಗೂ ಕಾನೂನಿನ ಅರಿವು ಉಂಟುಮಾಡಬಹುದಾದ ಪುಸ್ತಕ

ಇಡೀ ಜಗತ್ತು ಆತಂಕವಾದದ ಬಿಸಿಯನ್ನು ಅನುಭವಿಸುತ್ತಿದೆ. ಅದರ ರೂಪಗಳು ಹಲವು. ಅವುಗಳ ಮೂಲ ಆಸಕ್ತಿ ಮಾತ್ರ ಜನರಿಗೆ ತೊಂದರೆ ಉಂಟು ಮಾಡುವುದೇ ಆಗಿದೆ. ಆತಂಕವಾದ ಹಾಗೂ ಅಪರಾಧ ಜಗತ್ತಿನ ಪರಿಚಯವನ್ನು ಹಿರಿಯ ಪೊಲೀಸ್ ಅಧಿಕಾರಿ ಡಿ.ವಿ. ಗುರುಪ್ರಸಾದ್ ಇಲ್ಲಿ ಮಾಡಿಕೊಟ್ಟಿದ್ದಾರೆ.
ಅಪರಾಧ ಹಾಗೂ ಅಪರಾಧಿಗಳ ವೈಭವೀಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಗುರುಪ್ರಸಾದ್ ಕನ್ನಡದಲ್ಲಿ ಜನರಿಗೆ ಉಪಯುಕ್ತವಾಗುವ ಮಾಹಿತಿಗಳನ್ನು ಅದರ ಎಲ್ಲ ವಿವರಗಳೊಂದಿಗೆ ನೀಡಿದ್ದಾರೆ. ಇದರಲ್ಲಿ ಮುಂಬೈ ಮೇಲಿನ ದಾಳಿ, ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ‍್ ಅಪರಾಧ, ವಂಚಕರು, ನಕ್ಸಲರ ಕುರಿತಂತೆ ಇಲ್ಲಿ [...]

ಕರಿಕೆಯ ಕುಡಿ

ಕವಿ, ಜಾನಪದ ಸಂಶೋಧಕ ವಿ.ಗ. ನಾಯಕ ಆಗಾಗ ಬರೆದ ತಮ್ಮ ಅಂಕಣ ಬರಹಗಳನ್ನು `ಕರಿಕೆಯ ಕುಡಿ‘ ಯಲ್ಲಿ ಕೊಟ್ಟಿದ್ದಾರೆ. 37 ಕುಡಿಗಳು ಇಲ್ಲಿವೆ. ಉತ್ಸಾಹಿಗಳೂ, ಸೂಕ್ಷ್ಮಮತಿಗಳೂ ಜೊತೆಗೆ ವಿನಯವಂತರೂ ಆದ ಲೇಖಕರು `ಇಲ್ಲಿನ ಬರಹ ಹೆಮ್ಮರವೂ ಅಲ್ಲ, ಮರ, ಗಿಡ, ಹೂ, ಬಳ್ಳಿಗಳ ಸಾಲಿಗೆ ಸೇರುವಂಥದ್ದೂ ಅಲ್ಲ. ಒಂದೊಂದೂ ಕರಿಕೆಯ ಕುಡಿ‘ ಎಂದಿದ್ದಾರೆ. ಕರಿಕೆಯ ಕುಡಿ ದೇವರ ಪೂಜೆಗೆಂದು ಬಳಸುವ ಹುಲ್ಲಿನ ಜಾತಿ. ಅಂದರೆ, ಪುಟ್ಟದಾದರೂ ಅದರ ಮಹತ್ವ ಅದಕ್ಕಿದ್ದೇ ಇದೆ.
ಲೇಖಕರು ಸಾಹಿತ್ಯ, ಸಂಸ್ಕೃತಿ, ವ್ಯಕ್ತಿ, ಜಾತಿ [...]

ಕತ್ತಲೆ ರಾಕ್ಷಸರಿಗೆ ಬೆಳಕು

ಹಿರಿಯ ವಿದ್ವಾಂಸರಾದ ಎಲ್. ಬಸವರಾಜು ಬರೆದ ತಾತ್ವಿಕ ಚಿಂತನೆಗಳನ್ನು ಇಲ್ಲಿನ ಪುಟ್ಟ ಬರಹಗಳು ಒಳಗೊಂಡಿವೆ. ಸುಮಾರು ೧೭೦ ಬರಹಗಳನ್ನು ಒಳಗೊಂಡಿರುವ ಈ ಪುಸ್ತಕ ಬದುಕು ಹಾಗೂ ಜಗತ್ತಿನ ಕುರಿತಾಗಿ ತಾತ್ವಿಕವಾಗಿ ಚಿಂತಿಸುತ್ತದೆ ಮತ್ತು ಓದಿದವರನ್ನು ಯೋಚನೆಗೆ ಹಚ್ಚುತ್ತದೆ. ಇಲ್ಲೆಲ್ಲ ಎಲ್.ಬಿ. ಅವರ ಅಗಾಧ ಪಾಂಡಿತ್ಯ, ಜೀವನಾನುಭವ ತಿಳಿಜಲದಂತೆ ಪ್ರವಹಿಸುವುದನ್ನು ಕಾಣಬಹುದು.
ಇಲ್ಲಿ ಲೇಖಕರು ಮುಟ್ಟದ ವಿಷಯವೇ ಇಲ್ಲ ಎನ್ನಬಹುದು. ಪ್ರೀತಿಯಿಂದ, ಯೋಗದವರೆಗೆ, ಚಟದಿಂದ ದೇವರ ಬಗ್ಗೆ, ಅಂಬಿಗನಿಂದ ಬುದ್ಧನವರೆಗೆ ಅವರು ಚಿಂತನೆಯ ಒರೆಗೆ ಹಚ್ಚದ ವಿಷಯವೇ ಇಲ್ಲ. ಸಾಮಾನ್ಯ [...]

ಶಂಕರ ಮೊಕಾಶಿ ಪುಣೇಕರ ಅವರ ಬರಹಗಳು

‘ಅವಧೇಶ್ವರಿ’, `ಗಂಗವ್ವ ಗಂಗಾಮಾಯಿ’,`ನಟ ನಾರಾಯಣ’ ದಂಥ ಕನ್ನಡದ ಪ್ರಮುಖ ಕಾದಂಬರಿಗಳನ್ನು ಬರೆದ ಶಂಕರ ಮೊಕಾಶಿ ಪುಣೇಕರ ಅನನ್ಯ ಒಳನೋಟಗಳ ವಿಮರ್ಶಕರೂ ಆಗಿದ್ದರು. ಅವರು ಭಾರತೀಯ ಸಂಸ್ಕ್ರತಿಯನ್ನು ಅಭ್ಯಸಿಸಿ ಬರೆದ ಲೇಖನಗಳು, ಕನ್ನಡ ಸಾಹಿತ್ಯದ ಕುರಿತಾದ ಅವರ ಲೇಖನಗಳು, ಕನ್ನಡ ಸಾಹಿತ್ಯದ ಕುರಿತಾದ ಅವರ ಲೇಖನಗಳು ತಮ್ಮ ವಿಶಿಷ್ಠ ಒಳನೋಟಗಳಿಂದಾಗಿಯೇ ಗಮನ ಸೆಳೆಯುತ್ತವೆ.
ಇಂಥ ಲೇಖಕನ ಲೇಖನಗಳನ್ನು ಒಂದೆಡೆ ತಂದಿದ್ದಾರೆ ಜಿ.ಬಿ.ಹರೀಶ್. ಇದರೊಂದಿಗೆ ಸುಮತೀಂದ್ರ ನಾಡಿಗ್, ಮಲ್ಲೇಪುರಂ ಜಿ. ವೆಂಕಟೇಶ್, ರಹಮತ್ ತರೀಕೆರೆಯವರು ಮಾಡಿದ ಅವರ ವ್ಯಕ್ತಿತ್ವವನ್ನು ಇಡಿಯಾಗಿ ಪ್ರಕಟಿಸುವ [...]

ದುರಂತವನ್ನು ರೋಚಕಗೊಳಿಸುವ ಕತೆಯಲ್ಲ

2006ರ ಸಪ್ಟೆಂಬರ‍್ 29ರಂದು ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ಸುರೇಖಾ ಭೋತ್ಮಾಂಗೆ ಮತ್ತವರ ಮಗಳು ಪ್ರಿಯಾಂಕ ಭೋತ್ಮಾಂಗೆಯವರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿ ಸತತವಾಗಿ ಅತ್ಯಾಚಾರ ನಡೆಸಿ ಕೊಲ್ಲಲಾಯಿತು. ಸುರೇಖಾರ ಮಕ್ಕಳಾದ ರೋಷನ್ ಮತ್ತು ಸುಧೀರ‍್ ರನ್ನು ಕೊಚ್ಚಿ ಕೊಲ್ಲಲಾಯಿತು. ಈ ಭೀಕರ ಹತ್ಯಾಕಾಂಡದಲ್ಲಿ ಇಡೀ ಹಳ್ಳಿಯೇ ತೊಡಗಿಕೊಂಡಿತ್ತು. ಭೋತ್ಮಾಂಗೆಗಳು ದಲಿತರಾಗಿದ್ದರು. ಭೋತ್ಮಾಂಗೆಗಳನ್ನು ಈಗ ಮರೆತುಬಿಡಲಾಗಿದೆ. ಏಕೆಂದರೆ, ಹೇಗಿದ್ದರೂ ಈ ದೇಶದಲ್ಲಿ ದಿನಕ್ಕೆರಡು ದಲಿತರ ಕೊಲೆಯಾಗುತ್ತಲೇ ಇದೆ.
ಡಾ. ಆನಂದ್ ತೇಲ್ ತುಂಬ್ಡೆಯವರು ಸ್ವಾತಂತ್ರೋತ್ತರ ಭಾರತದ ಅತ್ಯಂತ ಹೀನಾಯ ಜಾತಿ ದೌರ್ಜನ್ಯವೊಂದನ್ನು ಈ [...]

ಕುಂತಿಯ ಅಂತರಾಳ

ಈ ಪುಸ್ತಕದಲ್ಲಿ ಸಾಗುವ ದೀರ್ಘ ಸ್ವಗತ (ಸಹಜವಾಗಿಯೇ) ಮಹಾಭಾರತದ ಮುಖ್ಯ ಪಾತ್ರ ಕುಂತಿಯದ್ದು. ಪುಟಗಟ್ಟಲೆ ಇದು ಹರಿಯುತ್ತದೆ ಮತ್ತು ಈಗಾಗಲೇ ಕುಂತಿಯ ಕುರಿತು ಗೊತ್ತಿರುವ (ಇನ್ನಿತರರು ಬರೆದ ಪುಸ್ತಕಗಳಿಂದಾಗಿ) ಹಲವು ಸಂಗತಿ, ಭಾವನೆ, ತಲ್ಲಣ, ಇಬ್ಬಂದಿಗಳನ್ನು ತನ್ನದೇ ಶೈಲಿಯಲ್ಲಿ ನಿರೂಪಿಸುತ್ತದೆ. ಇದಕ್ಕಾಗಿ ಲೇಖಕಿ ಸಾಕಷ್ಟು ಹೋಮ್ ವರ್ಕ್ ಸಹ ಮಾಡಿದ್ದಾರೆ. ಓದುತ್ತಾ ಓದುತ್ತಾ ನಮಗೆ ಕಾಣಿಸುವ ಅಸಂಬದ್ಧತೆ, ಅಭಾಸ, ತರ್ಕವಲ್ಲದ ತರ್ಕ, ಸೂಕ್ತವೆನಿಸದ ವಿವರಣೆ ಬರೆದಿಟ್ಟುಕೊಂಡರೆ ಮುಂದೊಮ್ಮೆ ನಾವೂ `ಕುಂತಿಯ ಅಂತರಾಳ‘ ಕುರಿತು ಕಿರು ಪುಸ್ತಕ ಬರೆಯಬಹುದು!
ಶೀರ್ಷಿಕೆ: [...]

ಚರಿತ್ರೆಯನ್ನು ಮುಚ್ಚಿರುವ ಪುರಾಣ, ದಂತಕಥೆಗಳ ಮುಸುಕನ್ನು ಸರಿಸಿ

ದಾಮೋದರ ಧರ್ಮಾನಂದ ಕೊಸಾಂಬಿಯವರು ಆಧುನಿಕ ಭಾರತದ ಕೆಲವೇ ಶ್ರೇಷ್ಠ ವಿದ್ವಾಂಸರಲ್ಲಿ ಪ್ರಮುಖರು (1907-1966). ಅವರ ಬರವಣಿಗೆ ವೈಜ್ಞಾನಿಕ, ವಸ್ತುನಿಷ್ಠ ಪರಿಶೀಲನೆಗೆ ಹೆಸರಾಗಿದೆ. ವಿಜ್ಞಾನ, ಪುರಾತತ್ವ ಶಾಸ್ತ್ರ, ಸಾಹಿತ್ಯ, ಭಾಷಾ ಶಾಸ್ತ್ರ, ಸಂಸ್ಕೃತಿ – ಹೀಗೆ ಜ್ಞಾನದ ಹಲವು ಕ್ಷೇತ್ರಗಳಲ್ಲಿ ಆಳವಾದ ಅರಿವನ್ನು ಸಂಪಾದಿಸಿ ಅದನ್ನು ತಮ್ಮ ಅನೇಕ ಲೇಖನಗಳ ಮೂಲಕ ಓದುಗರೊಂದಿಗೆ ಹಂಚಿಕೊಂಡಿದ್ದಾರೆ.
ಕೊಸಾಂಬಿಯವರ `ದಿ ಕಲ್ಚರ್ ಅಂಡ್ ಸಿವಿಲೈಸೇಷನ್ ಆಫ್ ಏನ್ಶಿಯೆಂಟ್ ಇಂಡಿಯಾ ಇನ್ ಹಿಸ್ಟೋರಿಕಲ್ ಔಟ್ಲೈನ್ ನ `ದಿ ಆರ್ಯನ್’ ಎಂಬ ಅಧ್ಯಾಯದ ಕನ್ನಡಾನುವಾದ ಈ [...]

ಸದ್ಭಾವ

ಕವಿ ಚೆನ್ನವೀರ ಕಣವಿಯವರ ಮುನ್ನುಡಿ, ಬೆನ್ನುಡಿಗಳನ್ನು ಹಾಗೂ ಕೆಲವು ಹಿರಿಯರು, ಕಿರಿಯರ ಕುರಿತಾದ ಸಾಂದರ್ಭಿಕವಾಗಿ ಬರೆದ ಲೇಖನಗಳನ್ನು ಒಳಗೊಂಡ ಸಂಗ್ರಹ ಇದು. ಈ ಮೊದಲು ಅವರ ಮುನ್ನುಡಿಗಳದೇ ಒಂದು ಸಂಗ್ರಹ `ಶುಭ ನುಡಿಯೆ ಹಕ್ಕಿ‘ ಪ್ರಕಟವಾಗಿತ್ತು.
ಸ.ಸ.ಮಾಳವಾಡ, ಬೆಟಗೇರಿ ಕೃಷ್ಣಶರ್ಮ, ಬಸವರಾಜ ಸಾದರ ಮುಂತಾದ ಲೇಖಕರ ಪುಸ್ತಕಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ. ಅಷ್ಟೇನೂ ಪ್ರಸಿದ್ಧರಲ್ಲದ ಲೇಖಕರಿಗೂ ಬೆನ್ನುತಟ್ಟಿ ಅವರು ಮುನ್ನುಡಿಗಳನ್ನು ಬರೆದಿರುವುದನ್ನು ನೋಡಬಹುದು.
ಇಲ್ಲಿ ಕುತೂಹಲಕಾರಿಯಾಗಿರುವುದು ಶೆ.ಗೋ.ಕುಲಕರ್ಣಿಯವರ `ನಾ ಕಂಡ ಗೆಳೆಯರ ಗುಂಪು‘ ಪುಸ್ತಕಕ್ಕೆ ಬರೆದ ಬೆನ್ನುಡಿ. ಈ ಪುಸ್ತಕ ಮೂರು [...]

ಮಾನವತೆಯ ಹುಡುಕಾಟ

ಮೂಲತಃ ಪ್ರಾಣಿಯಾದ ಮನುಷ್ಯ `ಮಾನವೀಯತೆ‘ಯನ್ನು ರೂಢಿಸಿಕೊಂಡಿದ್ದರಿಂದ ಪ್ರಾಣಿಗಳಿಗಿಂತ ಭಿನ್ನನಾಗಿ ಮಾನವನೆಂದು ಕರೆಸಿಕೊಂಡ. ಪ್ರತಿಯೊಬ್ಬರ ಆಳದಲ್ಲಿರುವ ಸಹಜ ಕ್ರೌರ್ಯ, ಹಿಂಸಾತ್ಮಕ ಸ್ವಭಾವವನ್ನು ಮೀರುತ್ತಲೇ ವ್ಯಕ್ತಿತ್ವವನ್ನು ಕಟ್ಟಿಕೊಂಡ. ಹಿಂಸೆ ತ್ಯಜಿಸಿ ಸದ್ವ್ಯಕ್ತಿಯಾಗುವುದೇ ಸಮಾಜದ ಪುರೋಗಾಮಿ ಚಿಂತನೆ.
ಮನುಷ್ಯನ ಆಳದಲ್ಲಿರುವ ಪ್ರಾಣಿ ಸಹಜ ಹಿಂಸಾ ಮನೋವಿಕಾರ ಕೆಲವೊಮ್ಮೆ ರಕ್ಕಸ ಕುಣಿತ ಮಾಡಿಬಿಡುತ್ತದೆ. ದೇಶಗಳ ಮಧ್ಯದ ಯುದ್ಧದಲ್ಲಿ, ಪೋಲೀಸ್ ದೌರ್ಜನ್ಯದಲ್ಲಿ, ಜಾತಿ ವೈಷಮ್ಯದಲ್ಲಿ, ಕೋಮು ಗಲಭೆಯಲ್ಲಿ ಮನುಷ್ಯ ಮತ್ತೆ ಕಾಡು ಮೃಗಗಳನ್ನೂ ಮೀರಿಸುವ ಹಿಂಸಾಪ್ರವೃತ್ತಿ ಪ್ರದರ್ಶಿಸಿಬಿಡುತ್ತಾನೆ.
ಹೀಗೆ ಕೌರ್ಯ ವಿಜೃಂಭಿಸಿದಾಗೆಲ್ಲಾ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿರುತ್ತದೆ. ಸಹವತ್ರಿಗಳ [...]

ಹೇ ರಾಮ್!!!

ವಿಶ್ವ ದಿಗಂತದಲ್ಲಿ ಗಾಂಧೀಜಿಯದು ಎದ್ದು ಕಾಣಿಸುವಂತಹ ವ್ಯಕ್ತಿತ್ವ. ಈ ವ್ಯಕ್ತಿತ್ವ ಬರೀ ಪಾಂಡಿತ್ಯದಿಂದ ಬಂದುದಲ್ಲ; ಸತ್ಯ ಮತ್ತು ಅಹಿಂಸೆಯ ಅನುಷ್ಟಾನದಿಂದ ಬಂದದ್ದು.
ಅವರದು ವಿಶ್ವಮಾನ ದೃಷ್ಟಿ. ಇಡೀ ಮನುಕುಲ ಒಂದು ಪರಿವಾರ. ಅದರ ವಿಕಾಸ, ಅದರ ಉಳಿವಿಗಾಗಿ ಅವರು ಪ್ರಯತ್ನಸಿದರು. ಯಾವುದೇ ಜಾತಿ, ಯಾವುದೇ ಪಂಥ, ಯಾವುದೇ ಪೀಠಕ್ಕೆ ಅವರು ತಮ್ಮನ್ನು ಕಟ್ಟಿ ಹಾಕಿಕೊಳ್ಳಲಿಲ್ಲ.
ಅವರದು ತೆರೆದ ಹೃದಯ, ತೆರೆದ ಮನಸ್ಸು. ಯಾವುದೇ ಸಮಾಜ, ರಾಷ್ಟ್ರ ವಿಕಾಸ ಹೊಂದಬೇಕಾದರೆ ಮಾನವೀಯ ಗುಣ ಅತಿ ಮುಖ್ಯ. ಈ ಗುಣದ ಮೆಟ್ಟಿಲು [...]