ಡಾ. ಆರ್. ವಿ. ಭಂಡಾರಿ ಅವರಿಗೆ ಶೃದ್ಧಾಂಜಲಿ

ಬೆಳಕು ಹಂಚಿದ ಬಾಲಕನನ್ನು ಕೆತ್ತಿದ ಡಾ. ಆರ್.ವಿ. ಭಂದಾರಿ ಡಾ ಇನ್ನಿಲ್ಲ. ಅವರ ಕೆಲವು ಕೃತಿಗಳು ಇವು.
ಕಣ್ಣೇಕಟ್ಟೆ ಕಾಡೇಗೂಡೆ (ಕವನ ಸಂಕಲನ)
ಕೊಲೆಗಾರ ಪತ್ತೆಯಾಗಲಿಲ್ಲ (ಕವನ ಸಂಕಲನ)
ಬೆಂಕಿಯ ಮಧ್ಯೆ (ಕಾದಂಬರಿ)
ಬಿರುಗಾಳಿ (ಕಾದಂಬರಿ)
ಗೋಡೆಗಳು ಮತ್ತು ನೆರೆ ಹಾವಳಿ (ಕಾದಂಬರಿ)
ತಲೆಮಾರು (ಕಾದಂಬರಿ)
ಯಾನ ಮತ್ತು ಇತರ ನಾಟಕಗಳು (ಮಕ್ಕಳ ನಾಟಕಗಳು)
ಕೇವಲ ಸಹಿ (ನವ ಸಾಕ್ಷರ ಸಾಹಿತ್ಯ)
ಇಟ್ಟ ಹೆಜ್ಜೆ ಮುಂದಕೆ (ನವ ಸಾಕ್ಷರ ಸಾಹಿತ್ಯ)
ಐದು ಯಕ್ಷಗಾನ ಏಕಾಂಕ ಪ್ರಸಂಗಗಳು (ನವ ಸಾಕ್ಷರ ಸಾಹಿತ್ಯ)
ಅಪ್ಪಿಕೋ ಮತ್ತೆರಡು ಮಕ್ಕಳ ನಾಟಕ (ಮಕ್ಕಳ ನಾಟಕಗಳು)
ಬೆಳಕಿನೆಡೆಗೆ [...]

ಹಿರಿಯ ಬಂಡಾಯ ಸಾಹಿತಿ ಆರ್.ವಿ.ಭಂಡಾರಿ ಇನ್ನಿಲ್ಲ.

ಹಿರಿಯ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ಆರ್.ವಿ.ಭಂಡಾರಿ (72) ದೀರ್ಘಕಾಲದ ಅಸ್ವಸ್ಥತೆಯ ನಂತರ ಶನಿವಾರ ಮಧ್ಯಾಹ್ನ ಮಣಿಪಾಲದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಸಾಹಿತ್ಯ ಕ್ಷೇತ್ರದಲ್ಲಿ ಬಂಡಾಯ ಸಾಹಿತಿಯೆಂದೇ ಪರಿಚಿತರಾಗಿದ್ದ ಇವರು ಬಂಡಾಯ ಸಾಹಿತ್ಯದ ಆರಂಭದ ಚಳುವಳಿಯ ದಿನಗಳಲ್ಲಿ ಅದರ ಮುಂಚೂಣಿಯಲ್ಲಿದ್ದ ಸಾಹಿತಿಗಳಲ್ಲೊಬ್ಬರಾಗಿದ್ದರು.
ಕಣ್ಣೇಕಟ್ಟೆ ಕಾಡೇಗೂಡೆ (ಕವನ ಸಂಕಲನ), ಬೆಂಕಿಯ ಮಧ್ಯೆ, ಬಿರುಗಾಳಿ, ಯಶವಂತನ ಯಶೋಗೀತೆ (ಮೂರೂ ಕಾದಂಬರಿ), ಯಾನ, ಬೆಳಕಿನೆಡೆಗೆ (ಮಕ್ಕಳ ನಾಟಕಗಳು), ಕನ್ನಡ ಕಾದಂಬರಿಯಲ್ಲಿ ವರ್ಣ ಮತ್ತು ವರ್ಗ ಸಂಘರ್ಷ (ವೈಚಾರಿಕ ವಿಮರ್ಶಾ ಸಂಕಲನ) ಮೊದಲಾದ ಕೃತಿಗಳನ್ನು ರಚಿಸಿದ್ದ ಭಂಡಾರಿಯವರಿಗೆ [...]

ಮರಣಾನಂತರವೂ ವಿಜ್ಞಾನಕ್ಕೆ ಮೀಸಲು ಈ ಜೀವ

ಹೆಸರಾಂತ ವಿಜ್ಞಾನ ಬರಹಗಾರ ಹಾಗೂ ಸಂಗೀತ ವಿಮರ್ಶಕ ಪ್ರೊ.ಜಿ.ಟಿ.ನಾರಾಯಣ ರಾವ್ ಇನ್ನಿಲ್ಲ. 82 ರ ಹರಯದಲ್ಲಿ ಬ್ರೈನ್ ಹ್ಯಾಮರೇಜ್ ನಿಂದ ಸತ್ತ ಇವರು ಜಿ.ಟಿ.ಎನ್. ಎಂದೇ ಪರಿಚಿತರು. ಇದೇ ಜೂನ್ 27ರಂದು ಮರಣಿಸಿದ ಇವರ ಆಸೆಯಂತೆ ಮೃತದೇಹವನ್ನು ಅಧ್ಯಯನಕ್ಕಾಗಿ ಆಸ್ಪತ್ರೆಗೆ ದಾನ ಮಾಡಲಾಯಿತು. ತನ್ನ ಅಪರಕರ್ಮವನ್ನು ಮಾಡಬಾರದೆಂದು ಹೇಳುತ್ತಿದ್ದ ಇವರಿಗೆ ದೇವರಲ್ಲಿ ನಂಬಿಕೆ ಇರಲಿಲ್ಲ.
ಬದುಕಿರುವಷ್ಟು ದಿನವೂ ವಿಜ್ಞಾನದ ಪ್ರಚಾರ ಬರಹವನ್ನು ಕೈಗೊಂಡಿದ್ದ ಇವರು ತಮ್ಮ ಸರಳ, ನೇರ ಬದುಕಿನಿಂದ ಆದರ್ಶನೀಯರು.
ಜಗತ್ತಿನ ಎಲ್ಲಾ [...]