Posted on August 23, 2008 by pusthakapreeethi
ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏಕಕಾಲಕ್ಕೆ ನಾಟಕ ರಚಿಸುವ ಕನ್ನಡದ ಹೆಸರಾಂತ ನಟ-ನಾಟಕಕಾರ ಗಿರೀಶ ಕಾರ್ನಾಡರ ಸಮಗ್ರ ನಾಟಕಗಳು ಇಂಗ್ಲೀಷ್ನಲ್ಲಿ ಆಕ್ಸ್ ಫರ್ಡ್ ಪ್ರೆಸ್ ನವರು ಪ್ರಕಟಿಸಿದ ನಂತರ ಇದೀಗ ಕನ್ನಡದಲ್ಲೂ ಪ್ರಕಟವಾಗಿದೆ.
ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಾರ್ನಾಡರು ಇದುವರೆಗೆ ಬರೆದಿರುವ ನಾಟಕಗಳ ಸಂಖ್ಯೆ ಕೇವಲ 11 ಎಂಬುದು ಕೆಲವರಿಗೆ ಅಚ್ಚರಿ ಸಂಗತಿಯಾಗಬಹುದು. ಅವರು ರಚಿಸಿದ 3-4 ನಾಟಕಗಳನ್ನು ಹೊರತುಪಡಿಸಿ ಇತರ ಎಲ್ಲಾ ನಾಟಕಗಳು ಕನ್ನಡ, ಇಂಗ್ಲೀಷ್ ಹಾಗೂ ನಾಲ್ಕಾರು ಭಾರತೀಯ ಭಾಷೆಗಳಲ್ಲಿ ಹಲವು ಪ್ರಯೋಗ [...]
Filed under: ಸಮಗ್ರ ಕೃತಿ | Tagged: ಗಿರೀಶ ಕಾರ್ನಾಡ, ಜ್ಞಾನಪೀಠ ಪ್ರಶಸ್ತಿ, ಟಿಪ್ಪುವಿನ ಕನಸುಗಳು, ತಲೆ ದಂಡ, ತುಘಲಕ್, ನಾಗಮಂಡಲ, ಮಾ ನಿಷಾದ, ಯಯಾತಿ | Leave a Comment »
Posted on July 30, 2008 by pusthakapreeethi
ಭವಕೆ ಬರುವಾಗಲೇ ಭಗವಂತ ಇಟ್ಟಿರುವ
ಮಣಿದೀಪವೊಂದೊಂದು ಹೃದಯದೊಳಗೆ
ಕೊನೆಗೊಮ್ಮೆ ಕತ್ತಲು ಕವಿದಾಗ
ಇರಲೆಂದು
ಮುಕ್ತಿ ಲಿಪಿ ಓದಿಸಲು ನಿಮ್ಮ ಬಳಿಗೆ…
ದೂರವಿದ್ದವರನ್ನು ಹತ್ತಿರಕೆ ತರಬೇಕು
ಹರಿವ ಹೊಳೆಗೂ ಉಂಟು ಎರಡು
ತೋಳು, ನೆಲವಪ್ಪಿದ ಎರಡು ದಂಡೆಗಳು
ಬಾಂಧವ್ಯ ಬೆಸೆಯಬೇಕಲ್ಲವೆ?…
ಈ ಎರಡು ಬೇರೆ ಬೇರೆ ಪದ್ಯದ ಸಾಲುಗಳು ಸುಬ್ಬಣ್ಣ ರಂಗನಾಥ ಎಕ್ಕುಂಡಿಯವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ `ಬಕುಲದ ಹೂವುಗಳು‘ ಕವನ ಸಂಕಲನದಿಂದ ಉದ್ಧರಿಸಿದಂಥವು. ದೈವತ್ವ, ಮನುಷ್ಯ ಸಂಬಂಧ – ಎರಡರಲ್ಲೂ ಬಹಳವಾಗಿ ನಂಬಿಕೆಯಿದ್ದ ಎಕ್ಕುಂಡಿಯವರ ಮತ್ತೆರಡು ವಿಚಿತ್ರ ಆಸಕ್ತಿ ಎಂದರೆ ಮಧ್ವ ಸಿದ್ಧಾಂತ [...]
Filed under: ಸಮಗ್ರ ಕೃತಿ | Tagged: ಗೋಧಿಯ ತೆನೆಗಳು, ಬಕುಲದ ಹೂವುಗಳು, ಬೆಳ್ಳಕ್ಕಿಗಳು, ಮತ್ಸ್ಯಗಂಧಿ, ಸುಬ್ಬಣ್ಣ ರಂಗನಾಥ ಎಕ್, ಹಾವಾಡಿಗರ ಹುಡುಗ | 1 Comment »