ಆಹಾ! ವಿಶ್ವ ಕಥಾ ಕೋಶ ಮತ್ತೆ ಕನ್ನಡಿಗರಿಗೆ ಲಭ್ಯವಾಗಲಿದೆ!!!

ಈ ಕಥಾಸಂಕಲನದ ಸಂಕಲನದ ಆಕರ್ಷಣೆ ಇದರ ಸಂಪಾದಕ ನಿರಂಜನ ಎಂಬುದರಲ್ಲಿದೆ. ಅಷ್ಟೇ ಅಲ್ಲ ಇದರ ಎಲ್ಲಾ ಸಂಪುಟಗಳು ನಿರಂಜನ ಅವರ ಪ್ರಾಸ್ತಾವಿಕ ಮಾತುಗಳನ್ನು ಹೊಂದಿದೆ. ಈ ಪ್ರಸ್ತಾವನೆಗಳು ಆ ಸಂಪುಟ ಯಾವ ದೇಶಗಳ ಕತೆಗಳಿಗೆ ಸಂಬಂಧಿಸಿದ್ದೋ ಆ ದೇಶಗಳ ಭೂಗೋಳ, ಇತಿಹಾಸ ಎಲ್ಲಾ ಚುಟಕಾದರೂ ಮಾಹಿತಿ ಭರಿತವಾಗಿವೆ.

ಈ ಮೇಲಿನ ಸಂಪುಟಗಳನ್ನು ಹೊಂದಿರುವ ಈ ವಿಶ್ವ ಕಥಾ ಕೋಶದಲ್ಲಿ ಮೇಲೆ ಪಟ್ಟಿಮಾಡಿದ ಶೀರ್ಷಿಕೆಗಳಡಿಯಲ್ಲಿ ಭಾರತ (ಎರಡು ಸಂಪುಟ – ಧರಣಿ ಮಂಡಲ ಮಧ್ಯದೊಳಗೆ ಕನ್ನಡದ ಕತೆಗಳಾದರೆ ಸುಭಾಷಿಣಿ – ಇತರ ಭಾರತೀಯ ಕತೆಗಳೊಂದಿಗೆ ಭಾರತದ ನೆರೆ ಹೊರೆ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಬರ್ಮಾದ ಕತೆಗಳ ಸಂಗ್ರಹ. ಇವಲ್ಲದೆ, ಆಫ್ರಿಕಾ ಖಂಡ, ವಿಯೆಟ್ನಾಮ್, ಮಂಗೋಲಿಯಾ, ಚೀನ, ಜಪಾನ್, ಕೊರಿಯಾ, ಇಂಗ್ಲಂಡ್, ಹಂಗರಿ, ರುಮಾನಿಯ, ಆಸ್ಟ್ರೇಲಿಯಾ, ನ್ಯುಜಿಲ್ಯಾಂಡ್, ರಷ್ಯ, ಐರ್ಲೆಂಡ್, ವೇಲ್ಸ್, ಸ್ಕಾಟ್ಲೆಂಡ್, ಜೆಕೊಸ್ಲೋವಾಕಿಯಾ, ಪೋಲೆಂಡ್, ಯಗೋಸ್ಲಾವಿಯಾ, ಅಲ್ಬೇನಿಯಾ, ಬಲ್ಗೇರಿಯಾ, ಅಮೆರಿಕ, ಕೆನಡಾ, ಮೆಕ್ಸಿಕೋ, ಐಸ್ಲ್ಯಾಂಡ್, ಡೆನ್ಮಾರ್ಕ್, ನಾರ್ವೆ, ಸ್ವೀಡನ್, ಫಿನ್ ಲ್ಯಾಂಡ್, ಇಟಲಿ, ಆಸ್ಟ್ರೇಲಿಯಾ, ಗ್ರೀಸ್, ಸೈಪ್ರಸ್, ಟರ್ಕಿ, ಹಾಲೆಂಡ್, ಬೆಲ್ಜಿಯಂ, ಸ್ವಿಟ್ಜರ‍್ಲ್ಯಾಂಡ್, ಜರ್ಮನಿ, ಸ್ಪೈನ್, ಪೋರ್ತುಗಲ್, ಇಂಡೋನೇಷ್ಯಾ, ಫಿಲಿಪೈನ್ಸ್, ಮಲಯ, ಸಿಂಗಾಪುರ, ಥಾಯ್ ಲ್ಯಾಂಡ್, ಫ್ರಾನ್ಸ್, ಕ್ಯೂಬಾ, ಜಮೇಯಿಕಾ, ಪಶ್ಚಿಮ ಏಷ್ಯಾ, ದಕ್ಷಿಣ ಅಮೇರಿಕಾ ದೇಶಗಳ ಕತೆಗಳು 24 ಸಂಪುಟಗಳಲ್ಲಿ ಓದಬಹುದು. ಕೊನೆಯ ಸಂಪುಟದಲ್ಲಿ ಪ್ರಾಚೀನ ಪಂಚ ಮಹಾಕಾವ್ಯಗಳಿಂದ ಆಯ್ದ ಕತೆಗಳು ಇವೆ.

 

 

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅನುವಾದ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಗಳು ಪ್ರಕಟ

 

ಬೆಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ನೀಡುವ 2009-2010, 2010-2011ನೇ ಸಾಲಿನ ಅನುವಾದ ಪ್ರಶಸ್ತಿ ಮತ್ತು 2008, 2009ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳು ಪ್ರಕಟವಾಗಿವೆ.

2009-2010ನೇ ಸಾಲಿನಲ್ಲಿ ಡಾ. ಸಿ.ಪಿ. ಕೃಷ್ಣಕುಮಾರ್, ಡಾ. ಕೆ.ಎಲ್. ಗೋಪಾಲಕೃಷ್ಣ ರಾವ್, ಡಾ. ಉಮಾ ವಿರೂಪಾಕ್ಷ ಕುಲಕರ್ಣಿ, ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಮತ್ತು ಪ್ರೊ.ಕೆ.ಎಸ್. ಭಗವಾನ್ ಅವರು ಅನುವಾದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2010-2011ನೇ ಸಾಲಿನಲ್ಲಿ ಅನುವಾದ ಪ್ರಶಸ್ತಿಗೆ ಡಾ. ಸದಾನಂದ ಕನವಳ್ಳಿ, ಡಾ.ಜಿ. ರಾಮಕೃಷ್ಣ, ಜಿ.ಎನ್. ರಂಗನಾಥ ರಾವ್, ಎನ್.ಎಸ್. ಸಂಗೊಳ್ಳಿ ಮತ್ತು ಪ್ರೊ. ಪಾರ್ವತಿ ಜಿ. ಐತಾಳ್ ಭಾಜನರಾಗಿದ್ದಾರೆ. ಪ್ರಶಸ್ತಿ ರೂ 25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಪ್ರಧಾನ ಗುರುದತ್ತ ಅವರು, ‘ವಿದ್ವಾಂಸರ ಒಟ್ಟಾರೆ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಲ್ಲತ್ತಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಇದೇ ತಿಂಗಳ ಕೊನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದು ತಿಳಿಸಿದರು.

ಪುಸ್ತಕ ಬಹುಮಾನ: 2008ನೇ ಸಾಲಿನಲ್ಲಿ ಕೆ.ಪಿ. ಸುರೇಶ್ (ಪುಸ್ತಕ- ಕೊಸಿಮೊ), ದಿವಂಗತ ಡಾ. ಎ. ಜಾನಕಿ (ಗೋದಾನ), ರವಿ ಬೆಳಗೆರೆ (ಚಲಂ), ಮಹಮ್ಮದ್ ಕುಳಾಯಿ (ಮಿತ್ತಬೈಲ್ ಯಮುನಕ್ಕ) ಮತ್ತು ಚಂದ್ರಕಾಂತ ಪೋಕಳೆ (ಭಂಡಾರ ಭೋಗ) ಅವರಿಗೆ ಉತ್ತಮ ಅನುವಾದಕ್ಕೆ ಪುಸ್ತಕ ಬಹುಮಾನ ಪ್ರಶಸ್ತಿ ದೊರೆತಿದೆ ಎಂದರು.

2009ನೇ ಸಾಲಿನಲ್ಲಿ ಮಾಧವ ಚಿಪ್ಪಳಿ (ಆರು ಟಾಲ್‌ಸ್ಟಾಯ್ ಕಥೆಗಳು ಪುಸ್ತಕ), ಡಾ.ಜೆ.ಎಸ್. ಕುಸುಮಗೀತಾ (ಅಂತಿಮ ಜ್ವಾಲೆ), ಡಾ.ಚಿದಾನಂದ ಸಾಲಿ (ಯಜ್ಞ – ಒಂಭತ್ತು ಕಥೆಗಳು), ಕೆ.ಕೆ. ಗಂಗಾಧರನ್ (ಬಳಲಿದ ಬಾಳಿಗೆ ಬೆಳಕು) ಮತ್ತು ಸುಮಿತ್ರಾ ಹಲವಾಯಿ (ಕನಸೆಂಬ ಊರುಗೋಲು) ಅವರಿಗೆ ಪುಸ್ತಕ ಬಹುಮಾನ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿ ತಲಾ ರೂ 10 ಸಾವಿರ ನಗದು, ಫಲಕ ಒಳಗೊಂಡಿದೆ.

ಕೃಪೆ:ಪ್ರಜಾವಾಣಿ

ಪ್ರಶಸ್ತಿ ಪಡೆದ ಪುಸ್ತಕಗಳಲ್ಲೊಂದಾದ ಕೊಸಿಮೊ ಪುಸ್ತಕದ ಬಗ್ಗೆ ಈಗಾಗಲೇ ಪುಸ್ತಕ ಪ್ರೀತಿಯಲ್ಲಿ ಪ್ರಕಟವಾಗಿದೆ. ಓದಲು ಇಲ್ಲ ಚಿಟಿಕೆ ಹೊಡೆಯಿರಿ ಹನ್ನೆರಡರ ಹುಡುಗ

ಹುತಾತ್ಮ ದಿನದ ಸಂದರ್ಭದಲ್ಲಿ ಅಮರ ಹುತಾತ್ಮ ಭಗತ್ ಸಿಂಗರ ಜೈಲಿನ ದಿನಚರಿ

1931 ರ ಮಾರ್ಚ್ 23. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಭಾರತೀಯರ ಪಾಲಿಗೆ ಅತ್ಯಂತ ದುಃಖದಾಯಕ ದಿನ. ಅಂದು ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳನ್ನು ಬ್ರಿಟಿಷ್ ಸರ್ಕಾರ  ನೇಣಿಗೇರಿಸಿದ ದಿನ. ಇಂದಿಗೂ ಭಗತ್ ಸಿಂಗ್ ಹುತಾತ್ಮನಾಗಿರದಿದ್ದರೆ ಈಗ ಇಷ್ಟು ವರ್ಷದ ಹಿರಿಯರಾಗಿರುತ್ತಿದ್ದರು ಅಯ್ಯೋ, ಆ ದಿನ ಕ್ಯಾಲೆಂಡರಿನಲ್ಲೇ ಇರಬಾರದಿತ್ತು ಎಂದು ದೇಶಭಕ್ತ ಭಾರತೀಯರು (ಹಿರಿಯ ಕಿರಿಯರೆನ್ನದೆ) ಹಂಬಲಿಸುವ ದಿನ. ಅವರ ಬಗ್ಗೆ ನೆನಸುವ ದಿನ. ಇವತ್ತು ಲೆಫ್ಟ್ ವರ್ಡ ಹೊರತಂದಿರುವ The Jail Notebook and Other Writings ಯನ್ನು ಅರ್ಧ ಬೆಲೆಗೆ ಮಾರುತ್ತಿದ್ದಾರೆ.

ಭಗತ್ ಸಿಂಗ್ ತನ್ನ ಕೊನೆಯ ಎರಡು ವರ್ಷಗಳನ್ನು ಜೈಲಿನಲ್ಲಿ ಗಲ್ಲು ಶಿಕ್ಷೆಯನ್ನು ಕಾಯುತ್ತಾ ಕಳೆದಿದ್ದರು. ಈ ಅವಧಿಯಲ್ಲಿ ಹುತಾತ್ಮ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಕಾನೂನು ಸಮರಗಳಲ್ಲಿ ಹೆಚ್ಚು ಪ್ರಚಾರವನ್ನು ಪಡೆದ ಒಂದು ಕಾನೂನು ಸಮರವನ್ನು ನಡೆಸುತ್ತಿದ್ದರು. ಇಷ್ಟೇ ಅಲ್ಲದೆ ನ್ಯಾಯಾಲಯವನ್ನೇ ಮಾದ್ಯಮ ಮಾಡಿಕೊಂಡು ತಮ್ಮ ಕ್ರಾಂತಿಕಾರಿ ಸಂದೇಶಗಳನ್ನು ದೇಶಾದ್ಯಂತ ಪ್ರಚಾರ ಮಾಡಿದರು.

ಅವರ ಹೋರಾಟದ ನಿಜಾಂಶ ತಿಳಿಯದ ಈಗಿನ ಜನತೆ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳು ಅನ್ಯಾಯವಾಗಿ ನೇಣಿಗೆ ಕೊರಳು ಕೊಟ್ಟರು, ಅವರು ಮನಸ್ಸು ಮಾಡಿದ್ದರೆ ಬದುಕಿರಬಹುದಾಗಿತ್ತು, ಅವರ ಹುತಾತ್ಮರಾಗುವ ನಿರ್ಧಾರ ತಪ್ಪು, ಬದುಕಿದ್ದು ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಾಗಿತ್ತು ಎಂದೆಲ್ಲಾ ಹೇಳುತ್ತಾರೆ. ಆದರೆ ಭಗತ್ ಸಿಂಗ್ ಅವರು ಖಂಡಿತವಾಗಿಯು ಸುಮ್ಮನೆ ಹುತಾತ್ಮರಾಗಲಿಲ್ಲ. ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಲ್ಪಾವಧಿಯ ಜೀವಮಾನದಲ್ಲಿ ಎಷ್ಟು ಸಾಧ್ಯವೋ ಅದಕ್ಕಿಂತ ಹೆಚ್ಚಿನ ಕೊಡುಗೆ ಭಗತ್ ಸಿಂಗ್ ಅವರದಿದೆ. ಅವರು ತಮ್ಮ ನೇಣಿನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಾನೂನು ಸಮರ ಮಾಡಿ ಸಮಯ ವ್ಯರ್ಥ ಮಾಡದೇ ಆ ಅಮೂಲ್ಯ ಸಮಯವನ್ನು ದೇಶದ ಜನತೆಗೆ ಬ್ರಿಟೀಷ್ ಸರ್ಕಾರದ ಎಡಬಿಡಂಗಿತನವನ್ನು ಅರಿತುಕೊಳ್ಳುವಂತೆ ಮಾಡಿ ದೇಶದ ಜನತೆ ಸ್ವಾತಂತ್ರ್ಯಕ್ಕಾಗಿ ಹೋರಾಡುವಂತೆ ಜೈಲಿನಲ್ಲಿದ್ದೂ ಪ್ರೇರೇಪಣೆ ನೀಡಿದರು.
ಅಷ್ಟೇ ಅಲ್ಲ ಜೈಲಿನಲ್ಲಿ ಅವರು ನಾಲ್ಕು ಪುಸ್ತಕಗಳನ್ನೂ ಬರೆದಿದ್ದರು. ಆ ಪುಸ್ತಕಗಳು ಜೈಲಿನಿಂದ ಕಷ್ಟಪಟ್ಟು ಹೊರತರಲ್ಪಟ್ಟಿದ್ದರೂ ನಾಶ ಮಾಡಲ್ಪಟ್ಟಿವೆ. ಜೈಲಿನಲ್ಲೇ ಉಳಿದಿದ್ದ ಯುವ ಕ್ರಾಂತಿಕಾರಿಯ ಟಿಪ್ಪಣೆ ಪುಸ್ತಕ ಮಾತ್ರ ನಮಗೀಗ ಲಭ್ಯವಿದೆ.

ಯುವ ಕ್ರಾಂತಿಕಾರಿಯನ್ನು ಅಧ್ಯಯನ ಮಾಡಲು ಇದೊಂದು ಅದ್ಬುತ ಗ್ರಂಥ.

ಶೀರ್ಷಿಕೆ : The Jail Notebook and Other Writings ಲೇಖಕರು: ಭಗತ್ ಸಿಂಗ್ ಸಂಪಾದಕರು: ಚಮನ್ ಲಾಲ್ ಪ್ರಕಾಶಕರು: ಲೆಫ್ಟ್ ವರ್ಡ ಬೆಲೆ:ರೂ.350 (ಇಂದಿನ ಬೆಲೆ ರೂ.175/- ) ಪುಟಗಳು : 192

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಚಿಟಿಕೆ ಹೊಡೆಯಿರಿ The Jail Notebook and Other Writings

ಪುಸ್ತಕ ಪ್ರೀತಿಯಲ್ಲಿರುವ ಭಗತ್ ಸಿಂಗ್ ಬಗೆಗಿನ ಇತರ ಪುಸ್ತಕಗಳು

ಹುತಾತ್ಮ ಭಗತ್ ಸಿಂಗರ ಅಲ್ಪಕಾಲದ ಬದುಕಿನ ಅಸಾಮಾನ್ಯ ಹರಹಿನ ಸಂಗ್ರಹರೂಪ

ಮರೆಯಲಾರದ ಮರೆಯಬಾರದ ಚೈತನ್ಯಕ್ಕೆ ನಮನ!

ದಿ ಮಾರ್ಟಿರ್ ಭಗತ್ ಸಿಂಗ್ಸ್ ಎಕ್ಸ್ಪರಿಮೆಂಟ್ಸ್ ಇನ್ ರೆವೆಲ್ಯೂಷನ್

 

ಅಂತರ್ರಾಷ್ಟ್ರೀಯ ಮಹಿಳಾ ದಿನದ ಶತಮಾನೋತ್ಸವದ ಶುಭಾಶಯಗಳೊಂದಿಗೆ ಅಡ್ಡಗೋಡೆಗಳನ್ನೊಡೆದು ಮುನ್ನಡೆದ 12 ಮಹಿಳೆಯರ ಕಥೆಗಳು

ತಮ್ಮ ಬದುಕಿನುದ್ದಕ್ಕೂ ಒಂದು ಶೋಷಣಾತ್ಮಕ ಯಥಾಸ್ಥಿತಿಗೆ ಸವಾಲೆಸೆದು, ಭಾರತದಲ್ಲಿ ಒಂದು ಮಹಿಳಾ ವಿಮೋಚನೆಯ ಆಂದೋಲನವನ್ನು ಕಟ್ಟಲು ಶ್ರಮಿಸಿದ ಹನ್ನೆರಡು ಮಹಿಳೆಯರನ್ನು ಕುರಿತ ಪುಸ್ತಕವಿದು. ಇವು ಅಸಾಮಾನ್ಯ ಬದುಕುಗಳ ಅಸಾಮಾನ್ಯ ಕಥೆಗಳು
– ಪುಸ್ತಕದ ಬೆನ್ನುಡಿಯಿಂದ

 

 

 

 

ಇದು, ಬೃಂದಾ ಕಾರಟ್ ಅವರು ಮುನ್ನುಡಿಯಲ್ಲಿ ಹೇಳಿರುವಂತೆ, ಹನ್ನೆರಡು ಅಸಾಮಾನ್ಯ ಮಹಿಳೆಯರ ಅಸಾಮಾನ್ಯ ಕಥೆಗಳ ಒಂದು ಸಂಗ್ರಹ. ಇವರೆಲ್ಲಾ ಭಾರತದ ವಿಭಿನ್ನ ಪ್ರದೇಶಗಳಿಂದ, ವಿಭಿನ್ನ ಹಿನ್ನೆಲೆಗಳಿಂದ ಬಂದವರು. ಆದರೆ ಅವರೆಲ್ಲರಲ್ಲಿದ್ದ ಒಂದು ಸಮಾನ ಸಂಗತಿಯೆಂದರೆ ಭಾರತ ಇನ್ನೂ ಬ್ರಿಟಿಷರ ದಾಸ್ಯದಲ್ಲಿದ್ದಾಗ ಅದರ ವಿರುದ್ಧ ಹೋರಾಟಗಳಲ್ಲಿ ರಾಜಕೀಯ ಪ್ರವೇಶಿಸಿದವರು. ಕಟ್ಟುಪಾಡುಗಳನ್ನು ಮುರಿದು, ಕೆಲವೊಮ್ಮೆ ತಮ್ಮ ಕುಟುಂಬಗಳ ವಿರೋಧವನ್ನೂ ಎದುರಿಸಿ ಸಾರ್ವಜನಿಕ ಜೀವನವನ್ನು ಪ್ರವೇಶಿಸಿದವರು. ಕಾರ್ಮಿಕ ಆಂದೋಲನದ ಮುಖಂಡರಾಗಿ, ರೈತ ಆಂದೋಲನದ ಮುಖಂಡರಾಗಿ ಹೆಚ್ಚೆಚ್ಚು ಮಹಿಳೆಯರನ್ನು ಕಾರ್ಯಾಚರಣೆಗೆ ಇಳಿಸಲು ಶ್ರಮಿಸಿದವರು. ಮುಂದೆ ಸ್ವತಂತ್ರ ಭಾರತದಲ್ಲೂ ತಮ್ಮ ಚಟುವಟಿಕೆಗಳನ್ನು ಮುಂದುವರೆಸಿ ಮಹಿಳಾ ಆಂದೋಲನವನ್ನು ಕಟ್ಟಿ ಬೆಳೆಸುವುದರೊಂದಿಗೆ ಮಹಿಳೆಯರ ಪ್ರಶ್ನೆಗಳನ್ನು, ಲಿಂಗ ಅಸಮಾನತೆಯ ಪ್ರಶ್ನೆಯನ್ನು ಒಟ್ಟು ರಾಜಕೀಯ ಮತ್ತು ಆರ್ಥಿಕ ಪ್ರಶ್ನೆಯೊಂದಿಗೆ ಬೆಸೆಯಲು ಪರಿಣಾಮಕಾರಿ ಪಾತ್ರ ವಹಿಸಿದವರು.

ಮೂಲತಃ ಇಂಗ್ಲೀಷ್ ಭಾಷೆಯಲ್ಲಿ ಪಾರ್ವತಿ ಮೆನನ್ ಅವರು ರಚಿಸಿದ ಈ ಕೃತಿಯನ್ನು ನವದೆಹಲಿಯ `ಲೆಫ್ಟ್ ವರ್ಡ್’ ಪ್ರಕಟಿಸಿದೆ. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಬೆಳ್ಳಿಹಬ್ಬದ ಆಚರಣೆಯ ಸಂದರ್ಭದಲ್ಲಿ ಕನ್ನಡದಲ್ಲಿ ಇದನ್ನು ‘ಅಧ್ಯಯನ ಪ್ರಕಾಶನ’ ಪ್ರಕಟಿಸಿತ್ತು. ಈಗ ಅಂತರ್ರಾಷ್ಟ್ರೀಯ ಮಹಿಳಾ ದಿನದ ಶತಮಾನೋತ್ಸವದ ಸಂದರ್ಭದಲ್ಲಿ ಎರಡನೇ ಮುದ್ರಣವನ್ನು ನಿಮ್ಮ ಮುಂದಿಡುತ್ತಿದ್ದೇವೆ. ಇದಕ್ಕೆ ಅನುಮತಿ ನೀಡಿದ ‘ಅಧ್ಯಯನ ಪ್ರಕಾಶನ’ಕ್ಕೆ, ಮೂಲ ಲೇಖಕರಾದ ಪಾರ್ವತಿ ಮೆನನ್ ಹಾಗೂ ‘ಲೆಫ್ಟ್ ವರ್ಡ್’ ಪ್ರಕಾಶನಕ್ಕೆ ಮತ್ತು ಅನುವಾದಿಸಿ ಕೊಟ್ಟ ಡಾ.ಎನ್. ಗಾಯತ್ರಿ ಯವರಿಗೆ  ನಾವು ಕೃತಜ್ಞರು.

-ಪ್ರಕಾಶಕರ ಮಾತು