ಪುಸ್ತಕ ಬಿಡುಗಡೆ – ಏಂಗೆಲ್ಸ್ 200 ಪುಸ್ತಕ ಸರಣಿಯ ಪುಸ್ತಕ ಜರ್ಮನ್ ರೈತಯುದ್ಧ (1524-25)

1524-25ರ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಈ ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧ ಸಾರಲಾಯಿತು.  ಇದು ರೈತ ಯುದ್ಧ ಹೂಡಿದ ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ – ಇವೆಲ್ಲವೂ ಆಗಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ..

ಈ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಈ ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ  ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದೆ. ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ. ಇದು ಏಂಗೆಲ್ಸ್ ಅವರು ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ. ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ಏಂಗೆಲ್ಸ್-200 ಮಾಲಿಕೆಯ ಈ ಪುಸ್ತಕದ ಬಿಡುಗಡೆಯನ್ನು ಸೆಪ್ಟೆಂಬರ್ 21 (ಬುಧವಾರ) ಸಂಜೆ 5 ಗಂಟೆ ಗೆ ಬಸವನಗುಡಿಯ ಹೊಸ ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ ಯಲ್ಲಿ ಹಮ್ಮಿ ಕೊಂಡಿದೆ. ಚಿಂತಕ ಜಿ.ಎನ್.ನಾಗರಾಜ್ ಈ ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧ ದ ಮರು-ಓದು : ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಆ ನಂತರ ಇದೇ ವಿಷಯದ ಮೇಲೆ ನಡೆಯಲಿರುವ ಸಂವಾದದಲ್ಲಿ. ರಾಘವೇಂದ್ರ ಕುಷ್ಟಗಿ ಮತ್ತು ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ನಾಯಕ ನವೀನ್ ಕುಮಾರ್ ಎಚ್.ಆರ್ ಪುಸ್ತಕ ಪರಿಚಯವೂ ಮಾಡಲಿದ್ದಾರೆ.

ZOOM LINK ಮೂಲಕವೂ ಭಾಗವಹಿಸಬಹುದು Meeting Id 81808577900 Password 637705

ಲು-ಷುನ್ ಕತೆಗಳು – ಪುಸ್ತಕ ಪ್ರೀತಿ ತಿಂಗಳ ಮಾತುಕತೆಯ ಇಂದಿನ ಪುಸ್ತಕ

ಸ್ಥಳ: ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ, (#70, ಸುಬ್ಬರಾಮಚೆಟ್ಟಿ ರಸ್ತೆ, ನೆಟ್ಟಕಲ್ಲಪ್ಪ ಸರ್ಕಲ್, ಬಸವನಗುಡಿ, ಬೆಂಗಳೂರು)

ZOOM ಮೂಲಕವೂ ಭಾಗವಹಿಸಬಹುದು Meeting ID : 83381253910 Password  : 537316

`ಸದನದಲ್ಲಿ ಶ್ರೀರಾಮರೆಡ್ಡಿ’ ಪುಸ್ತಕಬಿಡುಗಡೆ ಸಮಾರಂಭಕ್ಕೆ ಆಹ್ವಾನ

ನಾನು ಹೇಳುವುದೆಲ್ಲವೂ ನನ್ನ ಪಕ್ಷದ ನಿಲುವುಗಳುಎನ್ನುವ ಧ್ಯೇಯವಾಕ್ಯದ ವಿಶಿಷ್ಟ ರಾಜಕಾರಣಿ ನಮ್ಮ ಕಾಮ್ರೇಡ್ ಶ್ರೀರಾಮರೆಡ್ಡಿ

“ನಾನು ಹೇಳುವುದೆಲ್ಲವೂ ನನ್ನ ಪಕ್ಷದ ನಿಲುವುಗಳು, ಜನರ ವಿಚಾರದಲ್ಲಿ ರಾಜಕಾರಣಿಗೆ ವೈಯಕ್ತಿಕ ನಿಲುವು-ಪಕ್ಷದ ನಿಲುವು ಎಂಬ ಇಬ್ಬಂದಿತನ ಇರಕೂಡದು” ಎಂದು ನಂಬಿದ ರಾಜಕಾರಣಿ ಕಾಮ್ರೇಡ್ ಜಿ.ವಿ. ಶ್ರೀರಾಮರೆಡ್ಡಿ ಯವರು 1994 ಮತ್ತು 2004ರಲ್ಲಿ  ಹೀಗೆ ಎರಡು ಬಾರಿ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಯಾಗಿ ಬಾಗೇಪಲ್ಲಿಯಿಂದ ಚುನಾಯಿತರಾಗಿ ಶಾಸಕರಾಗಿದ್ದರು.

ವಿಧಾನಸಭೆಯಲ್ಲಿ ಶ್ರೀರಾಮರೆಡ್ಡಿಯವರು ಮಾತಿಗೆ ನಿಂತರೆಂದರೆ ಇಡೀ ಅಸೆಂಬ್ಲಿಯಲ್ಲಿ ಪಿನ್ ಡ್ರಾಪ್ ಸೈಲೆನ್ಸ್ ಇರುತ್ತಿತ್ತು. ಕೇವಲ ತನ್ನ ಕ್ಷೇತ್ರವಲ್ಲದೆ ಇಡೀ ರಾಜ್ಯವನ್ನು ಪ್ರತಿನಿಧಿಸಿ ಮಾತನಾಡುತ್ತಿದ್ದ ಶ್ರೀರಾಮರೆಡ್ಡಿಯವರ ವಿದ್ವತ್ತು, ಜನಪರ ಕಾಳಜಿ, ಹಣಕಾಸು, ರಾಜಕೀಯ, ಸಿದ್ದಾಂತದ ಬಗೆಗಿನ ಮಾಹಿತಿಗೆ ಇಡೀ ಸದನ ಕಣ್ಣು ಕಿವಿಗೊಟ್ಟು ಕೇಳಿಸಿಕೊಳ್ಳುತ್ತಿತ್ತು. ಶ್ರೀರಾಮರೆಡ್ಡಿಯವರು ಮಾತನಾಡುತ್ತಿದ್ದಾಗ ಯಾವುದಾದರೂ ಶಾಸಕರು ಮಧ್ಯೆ ಮಾತನಾಡಿದರೆ ಸಭಾಧ್ಯಕ್ಷರು ಅಂತಹ ಶಾಸಕರನ್ನು ಬೈದು ಕುಳ್ಳಿರಿಸಿದ್ದೂ ಇದೆ. ಶ್ರೀರಾಮ ರೆಡ್ಡಿಯವರು ವಿಧಾನಸಭೆಯಲ್ಲಿ ಮಾತನಾಡಿರುವ ದಾಖಲೆಗಳನ್ನು ತೆಗೆದು ನೋಡಿದಾಗ ಈ ಎಲ್ಲಾ ಅಂಶಗಳು ತಿಳಿದುಬರುತ್ತದೆ ಎನ್ನುತ್ತಾರೆ ಪುಸ್ತಕದ ಸಂಪಾದಕರು.

ವಿಧಾನಸಭೆಯಲ್ಲಿ ಮಾತನಾಡುವ ಶೈಲಿಯ ಜತೆಜತೆಗೆ ಇವರ ಕಾರ್ಯವೈಖರಿಯೂ ವಿಶಿಷ್ಟವಾದದ್ದು.

ಉಡುಪಿಯ ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ಮೆಡಿಕಲ್ ವಿದ್ಯಾರ್ಥಿಯನ್ನು ಅಪಹರಿಸಿದ್ದ ಕಿಡಿಗೇಡಿಗಳು ಅತ್ಯಾಚಾರ ಮಾಡಿದ್ದರು. ಕರಾವಳಿಯ ಶಾಸಕರಿಗೆ ಗೊತ್ತಾಗುವ ಮೊದಲೇ ಮಾಜಿ ಶಾಸಕ ಶ್ರೀರಾಮ ರೆಡ್ಡಿಯಲ್ಲಿ ಉಡುಪಿಯಲ್ಲಿದ್ದರು. ನೇರವಾಗಿ ಮಣಿಪಾಲ ಆಸ್ಪತ್ರೆಗೆ ತೆರಳಿದವರೇ, ಆಡಳಿತ ಮಂಡಳಿಯಿಂದ ಸ್ಪಷ್ಟನೆ ಕೇಳಿದರು. ಆ ಬಳಿಕ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮ ರೆಡ್ಡಿಯವರು ಅಲ್ಲೇ ಹೊರಗಡೆ ಸಿಪಿಐ(ಎಂ) ಪಕ್ಷದ ನಾಯಕರ ಜೊತೆ ಮಾತನಾಡಿ ಮಂಗಳೂರು ಉಡುಪಿಯಲ್ಲಿ ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಆಡಳಿತ ಮತ್ತು ವಿಪಕ್ಷಗಳಿಗೆ ವಿಷಯವೇನೆಂದು ಗೊತ್ತಾಗುವಷ್ಟರಲ್ಲಿ ಆರೋಪಿಗಳ ಬಂಧನವಾಗಿತ್ತು.

ಇಂತಹ ಗುಣಲಕ್ಷಣದ ಮಾಜಿ ಶಾಸಕ, ಸಿಪಿಐ(ಎಂ) ಮಾಜಿ ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿಯವರು ಸದನದಲ್ಲಿ ಮಾತನಾಡಿದ ದಾಖಲೆಗಳಿಂದ ಆಯ್ದ ಭಾಷಣಗಳ ಸಂಗ್ರಹ ಈ ಪುಸ್ತಕ.

ಪುಸ್ತಕ ಖರೀದಿಸಲು 9902249150 ಗೆ ಮೆಸೇಜ್ ಮಾಡಿ.

ಶೀರ್ಷಿಕೆ : ಸದನದಲ್ಲಿ ಶ್ರೀರಾಮರೆಡ್ಡಿ; ಸಂಪಾದಕರು:ನವೀನ್ ಸೂರಿಂಜೆ; ಪ್ರಕಟಣೆ:ಅಭಿರುಚಿ ಪ್ರಕಾಶನ; ಪ್ರಕಟಣಾ ವರ್ಷ:2022; ಪುಟಗಳು:184; ಬೆಲೆ:ರೂ.200